ದೇಶ- ವಿದೇಶ

ಭಾರತದಲ್ಲಿ ಮೊದಲ ಟೆಸ್ಲಾ ಕಾರು ಮಾರಾಟ : ಸಚಿವರೊಬ್ಬರು ಖರೀದಿ

ಮುಂಬೈ : ಭಾರತದಲ್ಲಿ ಮೊದಲ ಟೆಸ್ಲಾ ಕಾರು ಮಾರಾಟವಾಗಿದೆ. ‘ಮಾಡೆಲ್‌ Y’ ಟೆಸ್ಲಾ ಕಾರನ್ನು ಮಹಾರಾಷ್ಟ್ರದ ಸಚಿವರೊಬ್ಬರು ಖರೀದಿಸಿದ್ದಾರೆ.

ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ‘ಟೆಸ್ಲಾ ಎಕ್ಸ್‌ಪೀರಿಯೆನ್ಸ್ ಸೆಂಟರ್’ನಿಂದ ಕಾರು ಮಾರಾಟವಾಗಿದೆ. ಮೊದಲ ಟೆಸ್ಲಾ (ಮಾದರಿ Y) ಕಾರನ್ನು ಮಹಾರಾಷ್ಟ್ರ ರಾಜ್ಯದ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರಿಗೆ ಹಸ್ತಾಂತರಿಸಲಾಗಿದೆ.

ಭಾರತದಲ್ಲಿ ಮೊದಲನೆಯದಾದ ‘ಟೆಸ್ಲಾ ಎಕ್ಸ್‌ಪೀರಿಯೆನ್ಸ್ ಸೆಂಟರ್’ ಅನ್ನು ಜುಲೈ 15 ರಂದು ಉದ್ಘಾಟಿಸಲಾಗಿತ್ತು. ‘ಭಾರತದ ಮೊದಲ ಟೆಸ್ಲಾ ಕಾರು ಮಾಡೆಲ್ ವೈ ಖರೀದಿಸಲು ನನಗೆ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಮತ್ತು ಭಾರತದ ಮೊದಲ ಟೆಸ್ಲಾ ಕಾರಿನ ಮಾಲೀಕ ಪ್ರತಾಪ್ ಸರ್ನಾಯಕ್ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸಾರಿಗೆ ಸಚಿವನಾಗಿ, ನಾನು ಇದನ್ನು ಖರೀದಿಸಿದ್ದೇನೆ. ಮಹಾರಾಷ್ಟ್ರ ಸರ್ಕಾರ ಯಾವಾಗಲೂ ಪರಿಸರ ಸ್ನೇಹಿ ಕಾರುಗಳನ್ನು ರಸ್ತೆಗಳಿಗೆ ತರಲು ಪ್ರಯತ್ನಿಸುತ್ತದೆ. ಪರಿಸರ ಸ್ನೇಹಿ ವಾಹನಗಳನ್ನು ಸಾಧ್ಯವಾದಷ್ಟು ಬಳಸಲು ನಾನು ಸಾರ್ವಜನಿಕ ಜಾಗೃತಿ ಮೂಡಿಸುತ್ತೇನೆ. ಮುಂದಿನ 10 ವರ್ಷಗಳಲ್ಲಿ ರಸ್ತೆಗಳಲ್ಲಿ ಗರಿಷ್ಠ ಸಂಖ್ಯೆಯ ವಿದ್ಯುತ್ ವಾಹನಗಳನ್ನು ಹೊಂದಲು ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ವಿದ್ಯುತ್ ವಾಹನ ತಯಾರಿಕಾ ಕಂಪನಿಗಳಿಗೆ ಎಲ್ಲಾ ಅನುಕೂಲಗಳನ್ನು ಒದಗಿಸಲು ಸಾರಿಗೆ ಇಲಾಖೆ ಪ್ರಯತ್ನಿಸುತ್ತಿದೆ. ಅಂತಹ ವಾಹನಗಳ ಮಾಲೀಕರಿಗೂ ನಾವು ಸೌಲಭ್ಯಗಳನ್ನು ಒದಗಿಸುತ್ತೇವೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

38 mins ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 hours ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

3 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

4 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

7 hours ago