ನವದೆಹಲಿ: ನವೆಂಬರ್.25ರಂದು ಅಯೋಧ್ಯೆಯ ಮುಖ್ಯ ದೇವಾಲಯದ ಮೇಲೆ ಧ್ವಜಾರೋಹಣ ಮಾಡಲು ಶ್ರೀರಾಮ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದೆ. ಈ ಸಮಾರಂಭವು ರಾಮ ಮಂದಿರದ ಸಾಂಕೇತಿಕ ಪೂರ್ಣಗೊಳಿಸುವಿಕೆಯನ್ನು ಸಂಕೇತಿಸುತ್ತಿದೆ.
ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಧಾನ ಮಂತ್ರಿ ಮೋದಿಯವರು ನವೆಂಬರ್.25ರಂದು ಅಯೋಧ್ಯೆಗೆ ಆಗಮಿಸಲು ಒಪ್ಪಿಕೊಂಡಿದ್ದಾರೆ. ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
ಭಾರತ ಮತ್ತು ಪ್ರಪಂಚದಾದ್ಯಂತದ ಭಕ್ತರಿಗೆ ರಾಮ ಮಂದಿರ ಸಂಕೀರ್ಣ ಪೂರ್ಣಗೊಂಡಿರುವುದನ್ನು ಸೂಚಿಸಲು ಪ್ರಧಾನಿ ಮೋದಿ ಹಿಂದೂ ಸಂಪ್ರದಾಯದಲ್ಲಿ ಪವಿತ್ರ ಸಂಕೇತವಾದ ದೇವಾಲಯದ ಧ್ವಜಾರೋಹಣ ಮಾಡಲಿದ್ದಾರೆ. ಇದು ರಾಮಮಂದಿರ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ ಎಂಬುದನ್ನು ಸೂಚಿಸುತ್ತದೆ.
2022ರಲ್ಲಿ ರಾಮಮಂದಿರದ ನೆಲ ಮಹಡಿ ಪೂರ್ಣಗೊಂಡಿತ್ತು. ಈಗಾಗಲೇ ಗರ್ಭಗುಡಿಯಲ್ಲಿ ರಾಮ ಪರಿವಾರದ ದೇವತೆಗಳನ್ನು ಸ್ಥಾಪಿಸಲಾಗಿದೆ. ಎರಡನೇ ಮಹಡಿಯನ್ನು ಬಹು ಭಾಷೆಗಳಲ್ಲಿ ರಾಮಾಯಣ ಗ್ರಂಥಗಳನ್ನು ಸಂರಕ್ಷಿಸಲು ಆಧ್ಯಾತಿಕ ಆರ್ಕೈವ್ ಆಗಿ ಅಭಿವೃದ್ಧಿಪಡಿಸಲಾಗುತ್ತಿದೆ.
ಈ ದೊಡ್ಡ ಸಂಕೀರ್ಣದೊಳಗೆ 14 ಸಣ್ಣ ದೇವಾಲಯಗಳಿವೆ. ಅವೆಲ್ಲವೂ ಪೂರ್ಣಗೊಂಡಿವೆ. ಅವು ಶೀಘ್ರದಲ್ಲೇ ಸಾರ್ವಜನಿಕರಿಗೆ ಮುಕ್ತವಾಗುತ್ತವೆ.
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…