ದೇಶ- ವಿದೇಶ

ರೋಹಿಂಗ್ಯಾಗಳಿಗೆ ದೆಹಲಿಯಲ್ಲಿ ಫ್ಲಾಟ್‌ : ಹರ್ದೀಪ್ ಸಿಂಗ್ ಪುರಿ

ನವದೆಹಲಿ: ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ರೊಹಿಂಗ್ಯಾ ನಿರಾಶ್ರಿತರನ್ನು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದ್ದು, ಅವರಿಗೆ ಪಶ್ಚಿಮ ದೆಹಲಿಯ ಬಕ್ಕರ್​​ವಾಲಾದಲ್ಲಿ  ಫ್ಲಾಟ್ ನೀಡಲಾಗುವುದು ಎಂದು ಬಧುವಾರ ಬೆಳಗ್ಗೆ ಟ್ವೀಟ್ ಮಾಡಿದ್ದರು.

ಇದಾಗಿ ಕೆಲವೇ ಗಂಟೆಗಳಲ್ಲಿ ಹೇಳಿಕೆ ಹೊರಡಿಸಿದ ಕೇಂದ್ರ ಗೃಹ ಸಚಿವಾಲಯ ಯಾವುದೇ ನಿರ್ದೇಶನವನ್ನು ನೀಡಿಲ್ಲ. ಅಕ್ರಮ ವಿದೇಶಿಯರನ್ನು ಕಾನೂನು ಮೂಲಕ ದೇಶದಿಂದ ಗಡಿಪಾರು ಮಾಡುವ ವರಗೆ ಅವರನ್ನು ಬಂಧನದಲ್ಲೇ ಇರಿಸಲಾಗುವುದು ಎಂದಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕೇಂದ್ರ ಸಚಿವಾಲಯ ರೊಹಿಂಗ್ಯಾಗಳನ್ನು ಹೊಸ ಸ್ಥಳಕ್ಕೆ ಸ್ಥಳಾಂತರಿಸಲು ದೆಹಲಿ ಸರ್ಕಾರ ಮುಂದಾಗಿದೆ. ರೊಹಿಂಗ್ಯಾ ಅಕ್ರಮ ವಿದೇಶಿಗರು ಪ್ರಸ್ತುತ ಸ್ಥಳದಲ್ಲಿಯೇ ಮುಂದುವರಿಯುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಗೃಹ ಸಚಿವಾಲಯ GNCTD ಗೆ ನಿರ್ದೇಶನ ನೀಡಿದೆ. ಯಾಕೆಂದರೆ ಗೃಹಸಚಿವಾಲ ಈಗಾಗಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೂಲಕ ಸಂಬಂಧಪಟ್ಟ ದೇಶದೊಂದಿಗೆ ಅವರನ್ನು ಗಡೀಪಾರು ಮಾಡುವ ವಿಷಯ ಚರ್ಚಿಸುತ್ತಿದೆ ಎಂದಿದೆ.

ಬೆಳಗ್ಗೆ ಟ್ವೀಟ್ ಮಾಡಿದ ಪುರಿ, ದೇಶದಲ್ಲಿ ಆಶ್ರಮ ಬೇಡಿ ಬಂದ ನಿರಾಶ್ರಿತರನ್ನು ಭಾರತ ಸದಾ ಸ್ವಾಗತಿಸಿದೆ. ಮಹತ್ವದ ನಿರ್ಧಾರ ಏನೆಂದರೆ ಎಲ್ಲ ರೊಹಿಂಗ್ಯಾ ನಿರಾಶ್ರಿತರನ್ನು ದೆಹಲಿಯ ಬಕ್ಕರ್​​ವಾಲಾದಲ್ಲಿರುವ ಇಡಬ್ಯುಎಸ್ ಫ್ಲಾಟ್​​ಗೆ ಶಿಫ್ಟ್ ಮಾಡಲಾಗುವುದು. ಇಲ್ಲಿ ಇವರಿಗೆ ಮೂಲ ಸೌಕರ್ಯ, ಯುಎನ್ಎಚ್ ಸಿಆರ್ ಐಡಿ ಮತ್ತು ದಿನದ 24 ಗಂಟೆ ದೆಹಲಿ ಪೊಲೀಸ್ ರಕ್ಷಣೆ ನೀಡಲಾಗುವುದು. ದೇಶದ ವಲಸೆಗಾರರ ನೀತಿಯನ್ನು ಸಿಎಎ ಜತೆ ಜೋಡಿಸಿ ಅಪಪ್ರಚಾರ ಮಾಡಿ ತಮ್ಮ ಬೇಳೆ ಬೇಯಿಸಿಕೊಂಡವರಿಗೆ ಇದರಿಂದ ನಿರಾಶೆಯಾಗಿದೆ. ಭಾರತ ಯುಎನ್ ರೆಫ್ಯೂಗಿ ಕನ್ವೆನ್ಶನ್ 1951ನ್ನು ಗೌರವಿಸುತ್ತದೆ ಮತ್ತು ಪಾಲಿಸುತ್ತದೆ. ಯಾವುದೇ ನಿರಾಶ್ರಿತರಿಗೆ ಅವರ ಜನಾಂಗ, ಧರ್ಮ ಅಥವಾ ಸಮುದಾಯದ ಭೇದವಿಲ್ಲದೆ ಆಶ್ರಯ ಒದಗಿಸುತ್ತದೆ ಎಂದು ಸಚಿವ ಪುರಿ ಟ್ವೀಟ್ ಮಾಡಿದ್ದರು.

andolana

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

7 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

10 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

11 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

11 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

12 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

12 hours ago