ದೇಶ- ವಿದೇಶ

ರೋಹಿಂಗ್ಯಾಗಳಿಗೆ ದೆಹಲಿಯಲ್ಲಿ ಫ್ಲಾಟ್‌ : ಹರ್ದೀಪ್ ಸಿಂಗ್ ಪುರಿ

ನವದೆಹಲಿ: ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ರೊಹಿಂಗ್ಯಾ ನಿರಾಶ್ರಿತರನ್ನು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದ್ದು, ಅವರಿಗೆ ಪಶ್ಚಿಮ ದೆಹಲಿಯ ಬಕ್ಕರ್​​ವಾಲಾದಲ್ಲಿ  ಫ್ಲಾಟ್ ನೀಡಲಾಗುವುದು ಎಂದು ಬಧುವಾರ ಬೆಳಗ್ಗೆ ಟ್ವೀಟ್ ಮಾಡಿದ್ದರು.

ಇದಾಗಿ ಕೆಲವೇ ಗಂಟೆಗಳಲ್ಲಿ ಹೇಳಿಕೆ ಹೊರಡಿಸಿದ ಕೇಂದ್ರ ಗೃಹ ಸಚಿವಾಲಯ ಯಾವುದೇ ನಿರ್ದೇಶನವನ್ನು ನೀಡಿಲ್ಲ. ಅಕ್ರಮ ವಿದೇಶಿಯರನ್ನು ಕಾನೂನು ಮೂಲಕ ದೇಶದಿಂದ ಗಡಿಪಾರು ಮಾಡುವ ವರಗೆ ಅವರನ್ನು ಬಂಧನದಲ್ಲೇ ಇರಿಸಲಾಗುವುದು ಎಂದಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕೇಂದ್ರ ಸಚಿವಾಲಯ ರೊಹಿಂಗ್ಯಾಗಳನ್ನು ಹೊಸ ಸ್ಥಳಕ್ಕೆ ಸ್ಥಳಾಂತರಿಸಲು ದೆಹಲಿ ಸರ್ಕಾರ ಮುಂದಾಗಿದೆ. ರೊಹಿಂಗ್ಯಾ ಅಕ್ರಮ ವಿದೇಶಿಗರು ಪ್ರಸ್ತುತ ಸ್ಥಳದಲ್ಲಿಯೇ ಮುಂದುವರಿಯುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಗೃಹ ಸಚಿವಾಲಯ GNCTD ಗೆ ನಿರ್ದೇಶನ ನೀಡಿದೆ. ಯಾಕೆಂದರೆ ಗೃಹಸಚಿವಾಲ ಈಗಾಗಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೂಲಕ ಸಂಬಂಧಪಟ್ಟ ದೇಶದೊಂದಿಗೆ ಅವರನ್ನು ಗಡೀಪಾರು ಮಾಡುವ ವಿಷಯ ಚರ್ಚಿಸುತ್ತಿದೆ ಎಂದಿದೆ.

ಬೆಳಗ್ಗೆ ಟ್ವೀಟ್ ಮಾಡಿದ ಪುರಿ, ದೇಶದಲ್ಲಿ ಆಶ್ರಮ ಬೇಡಿ ಬಂದ ನಿರಾಶ್ರಿತರನ್ನು ಭಾರತ ಸದಾ ಸ್ವಾಗತಿಸಿದೆ. ಮಹತ್ವದ ನಿರ್ಧಾರ ಏನೆಂದರೆ ಎಲ್ಲ ರೊಹಿಂಗ್ಯಾ ನಿರಾಶ್ರಿತರನ್ನು ದೆಹಲಿಯ ಬಕ್ಕರ್​​ವಾಲಾದಲ್ಲಿರುವ ಇಡಬ್ಯುಎಸ್ ಫ್ಲಾಟ್​​ಗೆ ಶಿಫ್ಟ್ ಮಾಡಲಾಗುವುದು. ಇಲ್ಲಿ ಇವರಿಗೆ ಮೂಲ ಸೌಕರ್ಯ, ಯುಎನ್ಎಚ್ ಸಿಆರ್ ಐಡಿ ಮತ್ತು ದಿನದ 24 ಗಂಟೆ ದೆಹಲಿ ಪೊಲೀಸ್ ರಕ್ಷಣೆ ನೀಡಲಾಗುವುದು. ದೇಶದ ವಲಸೆಗಾರರ ನೀತಿಯನ್ನು ಸಿಎಎ ಜತೆ ಜೋಡಿಸಿ ಅಪಪ್ರಚಾರ ಮಾಡಿ ತಮ್ಮ ಬೇಳೆ ಬೇಯಿಸಿಕೊಂಡವರಿಗೆ ಇದರಿಂದ ನಿರಾಶೆಯಾಗಿದೆ. ಭಾರತ ಯುಎನ್ ರೆಫ್ಯೂಗಿ ಕನ್ವೆನ್ಶನ್ 1951ನ್ನು ಗೌರವಿಸುತ್ತದೆ ಮತ್ತು ಪಾಲಿಸುತ್ತದೆ. ಯಾವುದೇ ನಿರಾಶ್ರಿತರಿಗೆ ಅವರ ಜನಾಂಗ, ಧರ್ಮ ಅಥವಾ ಸಮುದಾಯದ ಭೇದವಿಲ್ಲದೆ ಆಶ್ರಯ ಒದಗಿಸುತ್ತದೆ ಎಂದು ಸಚಿವ ಪುರಿ ಟ್ವೀಟ್ ಮಾಡಿದ್ದರು.

andolana

Recent Posts

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

5 mins ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

11 mins ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

49 mins ago

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

3 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

3 hours ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

3 hours ago