ದೇಶ- ವಿದೇಶ

ರೋಹಿಂಗ್ಯಾಗಳಿಗೆ ದೆಹಲಿಯಲ್ಲಿ ಫ್ಲಾಟ್‌ : ಹರ್ದೀಪ್ ಸಿಂಗ್ ಪುರಿ

ನವದೆಹಲಿ: ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ರೊಹಿಂಗ್ಯಾ ನಿರಾಶ್ರಿತರನ್ನು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದ್ದು, ಅವರಿಗೆ ಪಶ್ಚಿಮ ದೆಹಲಿಯ ಬಕ್ಕರ್​​ವಾಲಾದಲ್ಲಿ  ಫ್ಲಾಟ್ ನೀಡಲಾಗುವುದು ಎಂದು ಬಧುವಾರ ಬೆಳಗ್ಗೆ ಟ್ವೀಟ್ ಮಾಡಿದ್ದರು.

ಇದಾಗಿ ಕೆಲವೇ ಗಂಟೆಗಳಲ್ಲಿ ಹೇಳಿಕೆ ಹೊರಡಿಸಿದ ಕೇಂದ್ರ ಗೃಹ ಸಚಿವಾಲಯ ಯಾವುದೇ ನಿರ್ದೇಶನವನ್ನು ನೀಡಿಲ್ಲ. ಅಕ್ರಮ ವಿದೇಶಿಯರನ್ನು ಕಾನೂನು ಮೂಲಕ ದೇಶದಿಂದ ಗಡಿಪಾರು ಮಾಡುವ ವರಗೆ ಅವರನ್ನು ಬಂಧನದಲ್ಲೇ ಇರಿಸಲಾಗುವುದು ಎಂದಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕೇಂದ್ರ ಸಚಿವಾಲಯ ರೊಹಿಂಗ್ಯಾಗಳನ್ನು ಹೊಸ ಸ್ಥಳಕ್ಕೆ ಸ್ಥಳಾಂತರಿಸಲು ದೆಹಲಿ ಸರ್ಕಾರ ಮುಂದಾಗಿದೆ. ರೊಹಿಂಗ್ಯಾ ಅಕ್ರಮ ವಿದೇಶಿಗರು ಪ್ರಸ್ತುತ ಸ್ಥಳದಲ್ಲಿಯೇ ಮುಂದುವರಿಯುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಗೃಹ ಸಚಿವಾಲಯ GNCTD ಗೆ ನಿರ್ದೇಶನ ನೀಡಿದೆ. ಯಾಕೆಂದರೆ ಗೃಹಸಚಿವಾಲ ಈಗಾಗಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೂಲಕ ಸಂಬಂಧಪಟ್ಟ ದೇಶದೊಂದಿಗೆ ಅವರನ್ನು ಗಡೀಪಾರು ಮಾಡುವ ವಿಷಯ ಚರ್ಚಿಸುತ್ತಿದೆ ಎಂದಿದೆ.

ಬೆಳಗ್ಗೆ ಟ್ವೀಟ್ ಮಾಡಿದ ಪುರಿ, ದೇಶದಲ್ಲಿ ಆಶ್ರಮ ಬೇಡಿ ಬಂದ ನಿರಾಶ್ರಿತರನ್ನು ಭಾರತ ಸದಾ ಸ್ವಾಗತಿಸಿದೆ. ಮಹತ್ವದ ನಿರ್ಧಾರ ಏನೆಂದರೆ ಎಲ್ಲ ರೊಹಿಂಗ್ಯಾ ನಿರಾಶ್ರಿತರನ್ನು ದೆಹಲಿಯ ಬಕ್ಕರ್​​ವಾಲಾದಲ್ಲಿರುವ ಇಡಬ್ಯುಎಸ್ ಫ್ಲಾಟ್​​ಗೆ ಶಿಫ್ಟ್ ಮಾಡಲಾಗುವುದು. ಇಲ್ಲಿ ಇವರಿಗೆ ಮೂಲ ಸೌಕರ್ಯ, ಯುಎನ್ಎಚ್ ಸಿಆರ್ ಐಡಿ ಮತ್ತು ದಿನದ 24 ಗಂಟೆ ದೆಹಲಿ ಪೊಲೀಸ್ ರಕ್ಷಣೆ ನೀಡಲಾಗುವುದು. ದೇಶದ ವಲಸೆಗಾರರ ನೀತಿಯನ್ನು ಸಿಎಎ ಜತೆ ಜೋಡಿಸಿ ಅಪಪ್ರಚಾರ ಮಾಡಿ ತಮ್ಮ ಬೇಳೆ ಬೇಯಿಸಿಕೊಂಡವರಿಗೆ ಇದರಿಂದ ನಿರಾಶೆಯಾಗಿದೆ. ಭಾರತ ಯುಎನ್ ರೆಫ್ಯೂಗಿ ಕನ್ವೆನ್ಶನ್ 1951ನ್ನು ಗೌರವಿಸುತ್ತದೆ ಮತ್ತು ಪಾಲಿಸುತ್ತದೆ. ಯಾವುದೇ ನಿರಾಶ್ರಿತರಿಗೆ ಅವರ ಜನಾಂಗ, ಧರ್ಮ ಅಥವಾ ಸಮುದಾಯದ ಭೇದವಿಲ್ಲದೆ ಆಶ್ರಯ ಒದಗಿಸುತ್ತದೆ ಎಂದು ಸಚಿವ ಪುರಿ ಟ್ವೀಟ್ ಮಾಡಿದ್ದರು.

andolana

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

22 mins ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

3 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

5 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

5 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

6 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

9 hours ago