ದೇಶ- ವಿದೇಶ

ರೋಹಿಂಗ್ಯಾಗಳಿಗೆ ದೆಹಲಿಯಲ್ಲಿ ಫ್ಲಾಟ್‌ : ಹರ್ದೀಪ್ ಸಿಂಗ್ ಪುರಿ

ನವದೆಹಲಿ: ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ರೊಹಿಂಗ್ಯಾ ನಿರಾಶ್ರಿತರನ್ನು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದ್ದು, ಅವರಿಗೆ ಪಶ್ಚಿಮ ದೆಹಲಿಯ ಬಕ್ಕರ್​​ವಾಲಾದಲ್ಲಿ  ಫ್ಲಾಟ್ ನೀಡಲಾಗುವುದು ಎಂದು ಬಧುವಾರ ಬೆಳಗ್ಗೆ ಟ್ವೀಟ್ ಮಾಡಿದ್ದರು.

ಇದಾಗಿ ಕೆಲವೇ ಗಂಟೆಗಳಲ್ಲಿ ಹೇಳಿಕೆ ಹೊರಡಿಸಿದ ಕೇಂದ್ರ ಗೃಹ ಸಚಿವಾಲಯ ಯಾವುದೇ ನಿರ್ದೇಶನವನ್ನು ನೀಡಿಲ್ಲ. ಅಕ್ರಮ ವಿದೇಶಿಯರನ್ನು ಕಾನೂನು ಮೂಲಕ ದೇಶದಿಂದ ಗಡಿಪಾರು ಮಾಡುವ ವರಗೆ ಅವರನ್ನು ಬಂಧನದಲ್ಲೇ ಇರಿಸಲಾಗುವುದು ಎಂದಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕೇಂದ್ರ ಸಚಿವಾಲಯ ರೊಹಿಂಗ್ಯಾಗಳನ್ನು ಹೊಸ ಸ್ಥಳಕ್ಕೆ ಸ್ಥಳಾಂತರಿಸಲು ದೆಹಲಿ ಸರ್ಕಾರ ಮುಂದಾಗಿದೆ. ರೊಹಿಂಗ್ಯಾ ಅಕ್ರಮ ವಿದೇಶಿಗರು ಪ್ರಸ್ತುತ ಸ್ಥಳದಲ್ಲಿಯೇ ಮುಂದುವರಿಯುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಗೃಹ ಸಚಿವಾಲಯ GNCTD ಗೆ ನಿರ್ದೇಶನ ನೀಡಿದೆ. ಯಾಕೆಂದರೆ ಗೃಹಸಚಿವಾಲ ಈಗಾಗಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೂಲಕ ಸಂಬಂಧಪಟ್ಟ ದೇಶದೊಂದಿಗೆ ಅವರನ್ನು ಗಡೀಪಾರು ಮಾಡುವ ವಿಷಯ ಚರ್ಚಿಸುತ್ತಿದೆ ಎಂದಿದೆ.

ಬೆಳಗ್ಗೆ ಟ್ವೀಟ್ ಮಾಡಿದ ಪುರಿ, ದೇಶದಲ್ಲಿ ಆಶ್ರಮ ಬೇಡಿ ಬಂದ ನಿರಾಶ್ರಿತರನ್ನು ಭಾರತ ಸದಾ ಸ್ವಾಗತಿಸಿದೆ. ಮಹತ್ವದ ನಿರ್ಧಾರ ಏನೆಂದರೆ ಎಲ್ಲ ರೊಹಿಂಗ್ಯಾ ನಿರಾಶ್ರಿತರನ್ನು ದೆಹಲಿಯ ಬಕ್ಕರ್​​ವಾಲಾದಲ್ಲಿರುವ ಇಡಬ್ಯುಎಸ್ ಫ್ಲಾಟ್​​ಗೆ ಶಿಫ್ಟ್ ಮಾಡಲಾಗುವುದು. ಇಲ್ಲಿ ಇವರಿಗೆ ಮೂಲ ಸೌಕರ್ಯ, ಯುಎನ್ಎಚ್ ಸಿಆರ್ ಐಡಿ ಮತ್ತು ದಿನದ 24 ಗಂಟೆ ದೆಹಲಿ ಪೊಲೀಸ್ ರಕ್ಷಣೆ ನೀಡಲಾಗುವುದು. ದೇಶದ ವಲಸೆಗಾರರ ನೀತಿಯನ್ನು ಸಿಎಎ ಜತೆ ಜೋಡಿಸಿ ಅಪಪ್ರಚಾರ ಮಾಡಿ ತಮ್ಮ ಬೇಳೆ ಬೇಯಿಸಿಕೊಂಡವರಿಗೆ ಇದರಿಂದ ನಿರಾಶೆಯಾಗಿದೆ. ಭಾರತ ಯುಎನ್ ರೆಫ್ಯೂಗಿ ಕನ್ವೆನ್ಶನ್ 1951ನ್ನು ಗೌರವಿಸುತ್ತದೆ ಮತ್ತು ಪಾಲಿಸುತ್ತದೆ. ಯಾವುದೇ ನಿರಾಶ್ರಿತರಿಗೆ ಅವರ ಜನಾಂಗ, ಧರ್ಮ ಅಥವಾ ಸಮುದಾಯದ ಭೇದವಿಲ್ಲದೆ ಆಶ್ರಯ ಒದಗಿಸುತ್ತದೆ ಎಂದು ಸಚಿವ ಪುರಿ ಟ್ವೀಟ್ ಮಾಡಿದ್ದರು.

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

45 mins ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

5 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

5 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

5 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

5 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

5 hours ago