ದೇಶ- ವಿದೇಶ

ಕೇರಳದಲ್ಲಿ ಪ್ರವಾಹದ ತೀವ್ರತೆ: ರಕ್ಷಣಾ ಕಾರ್ಯಾಚರಣೆಗೆ 1,167 ಮಂದಿ ನಿಯೋಜನೆ

ವಯನಾಡು: ಮೆಪ್ಪಾಡಿಯಲ್ಲಿ ಇರುವ ಸರ್ಕಾರಿ ಆಸ್ಪತ್ರೆಯ ಶವಾಗಾರವನ್ನು ತಾತ್ಕಾಲಿಕವಾಗಿ ಸಭಾಂಗಣಕ್ಕೆ ಶಿಫ್ಟ್ ಮಾಡಲಾಗಿದೆ.

ಭೂಕುಸಿತದಲ್ಲಿ ಗಾಯಗೊಂಡವರ ಚಿಕಿತ್ಸೆಗಾಗಿ ಮೇಪ್ಪಾಡಿ ಪಾಲಿಟೆಕ್ನಿಕ್‌ನಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲಾಗಿದೆ. ಕಣ್ಣೂರು, ಕಲ್ಲಿಕೋಟೆ ಹಾಗೂ ತೃಶೂರ್‌ನ ವೈದ್ಯಕೀಯ ಕಾಲೇಜುಗಳಿಂದ ತಂಡಗಳನ್ನು ವಯನಾಡಿಗೆ ಕರೆತರಲಾಗಿದೆ. ಶಸ್ತ್ರಚಿಕಿತ್ಸೆ, ಹೃದ್ರೋಗ, ಮೂಳೆ ಚಿಕಿತ್ಸೆ, ಮನೋವೈದ್ಯ ಹಾಗೂ ವಿಧಿವಿಜ್ಞಾನ ವಿಭಾಗಗಳಿಂದ ಹೆಚ್ಚುವರಿ ವೈದ್ಯರು ಮತ್ತು ನರ್ಸ್‌ಗಳನ್ನು ನಿಯೋಜಿಸಲಾಗಿದೆ.

ದುರಂತ ಪೀಡಿತ ಚುರಲ್‌ಮಲದಲ್ಲಿ ಸೇನೆ ನಿರ್ಮಿಸುತ್ತಿರುವ ತಾತ್ಕಾಲಿಕ ಬೈಲಿ ಸೇತುವೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇದು ಪೂರ್ಣಗೊಂಡ ಬಳಿಕ ಕಾರ್ಯಾಚರಣೆಗೆ ಇನ್ನಷ್ಟು ವೇಗ ದೊರೆಯಲಿದೆ.

ಪ್ರವಾಹದ ತೀವ್ರತೆಗೆ ಚುರಲ್‌ಮಲದಲ್ಲಿನ ಸೇತುವೆ ಕೊಚ್ಚಿ ಹೋಗಿದ್ದು, ಅತೀ ಹೆಚ್ಚು ದುರಂತಕ್ಕೊಳಗಾದ ಮುಂಡಕೈ ಭಾಗದೊಂಡಿಗೆ ಸಂಪರ್ಕ ಕಡಿತಗೊಂಡಿದೆ. ಇದು ಕೂಡ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ. ಹೀಗಾಗಿ ಸೇನಾ ಪಡೆ ಎರಡೂ ಗ್ರಾಮಗಳನ್ನು ಸಂಪರ್ಕಿಸಲು ತಾತ್ಕಾಲಿಕ ಬೈಲಿ ಸೇತುವೆ ನಿರ್ಮಿಸುತ್ತಿದೆ.

ರಕ್ಷಣಾ ಕಾರ್ಯಾಚರಣೆಗೆ ಸುಮಾರು 1,167 ಮಂದಿಯನ್ನು ನಿಯೋಜಿಸಲಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

34 seconds ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

8 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

14 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

19 mins ago

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

23 hours ago