ವಯನಾಡು: ಮೆಪ್ಪಾಡಿಯಲ್ಲಿ ಇರುವ ಸರ್ಕಾರಿ ಆಸ್ಪತ್ರೆಯ ಶವಾಗಾರವನ್ನು ತಾತ್ಕಾಲಿಕವಾಗಿ ಸಭಾಂಗಣಕ್ಕೆ ಶಿಫ್ಟ್ ಮಾಡಲಾಗಿದೆ.
ಭೂಕುಸಿತದಲ್ಲಿ ಗಾಯಗೊಂಡವರ ಚಿಕಿತ್ಸೆಗಾಗಿ ಮೇಪ್ಪಾಡಿ ಪಾಲಿಟೆಕ್ನಿಕ್ನಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲಾಗಿದೆ. ಕಣ್ಣೂರು, ಕಲ್ಲಿಕೋಟೆ ಹಾಗೂ ತೃಶೂರ್ನ ವೈದ್ಯಕೀಯ ಕಾಲೇಜುಗಳಿಂದ ತಂಡಗಳನ್ನು ವಯನಾಡಿಗೆ ಕರೆತರಲಾಗಿದೆ. ಶಸ್ತ್ರಚಿಕಿತ್ಸೆ, ಹೃದ್ರೋಗ, ಮೂಳೆ ಚಿಕಿತ್ಸೆ, ಮನೋವೈದ್ಯ ಹಾಗೂ ವಿಧಿವಿಜ್ಞಾನ ವಿಭಾಗಗಳಿಂದ ಹೆಚ್ಚುವರಿ ವೈದ್ಯರು ಮತ್ತು ನರ್ಸ್ಗಳನ್ನು ನಿಯೋಜಿಸಲಾಗಿದೆ.
ದುರಂತ ಪೀಡಿತ ಚುರಲ್ಮಲದಲ್ಲಿ ಸೇನೆ ನಿರ್ಮಿಸುತ್ತಿರುವ ತಾತ್ಕಾಲಿಕ ಬೈಲಿ ಸೇತುವೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇದು ಪೂರ್ಣಗೊಂಡ ಬಳಿಕ ಕಾರ್ಯಾಚರಣೆಗೆ ಇನ್ನಷ್ಟು ವೇಗ ದೊರೆಯಲಿದೆ.
ಪ್ರವಾಹದ ತೀವ್ರತೆಗೆ ಚುರಲ್ಮಲದಲ್ಲಿನ ಸೇತುವೆ ಕೊಚ್ಚಿ ಹೋಗಿದ್ದು, ಅತೀ ಹೆಚ್ಚು ದುರಂತಕ್ಕೊಳಗಾದ ಮುಂಡಕೈ ಭಾಗದೊಂಡಿಗೆ ಸಂಪರ್ಕ ಕಡಿತಗೊಂಡಿದೆ. ಇದು ಕೂಡ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ. ಹೀಗಾಗಿ ಸೇನಾ ಪಡೆ ಎರಡೂ ಗ್ರಾಮಗಳನ್ನು ಸಂಪರ್ಕಿಸಲು ತಾತ್ಕಾಲಿಕ ಬೈಲಿ ಸೇತುವೆ ನಿರ್ಮಿಸುತ್ತಿದೆ.
ರಕ್ಷಣಾ ಕಾರ್ಯಾಚರಣೆಗೆ ಸುಮಾರು 1,167 ಮಂದಿಯನ್ನು ನಿಯೋಜಿಸಲಾಗಿದೆ.
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…