ನವದೆಹಲಿ: ಒಂದೂವರೆ ದಶಕ ಕಳೆದರೂ ಜನಗಣತಿ ನಡೆಸದೇ ಇರುವುದರಿಂದ ದೇಶದ 14 ಕೋಟಿ ಮಂದಿಗೆ ಆಹಾರ ಭದ್ರತೆ ಯೋಜನೆ ನಿರಾಕರಿಸಿದಂತಾಗಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸೋನಿಯಾ ಗಾಂಧಿ, 2013ರಲ್ಲಿ ಯುಪಿಎ ಸರ್ಕಾರ ಜಾರಿ ಮಾಡಿದ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ, ದೇಶದ ಬಡವರ ಹಸಿವು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕೋವಿಡ್-19 ಸಂದರ್ಭದಲ್ಲಿ ಲಕ್ಷಾಂತರ ಕುಟುಂಬಗಳಿಗೆ ಆಸರೆಯಾಗಿದೆ ಎಂದರು.
ಪ್ರತಿ ಹತ್ತು ವರ್ಷಗಳಿಹೊಮ್ಮೆ ನಡೆಯಬೇಕಿದ್ದ ಜನಗಣತಿ ಒಂದೂವರೆ ದಶಕ ಕಳೆದರೂ ನಡೆದಿಲ್ಲ. ಈ ಬಾರಿಯೂ ಕೂಡ ಜನಗಣತಿ ನಡೆಯುವುದಿಲ್ಲ ಎಂಬುದು ಇವರು ಮಂಡಿಸಿದ ಬಜೆಟ್ ಅಂಶಗಳಿಂದ ತಿಳಿಯುತ್ತದೆ.
ಜನಗಣತಿ ನಡೆಯದೆ ಇರುವುದರಿಂದ ಸುಮಾರು 14 ಕೋಟಿ ಅರ್ಹ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯಡಿ (ಎನ್ಎಫ್ಎಸ್ಎ) ಹಕ್ಕು ನಿರಾಕರಿಸಲಾಗುತ್ತಿದೆ. 2011ರ ಜನಗಣತಿಯ ಅನ್ವಯ ಸುಮಾರು 81.4 ಕೋಟಿ ಜನರು ಈ ಸೌಲಭ್ಯಕ್ಕೆ ಅರ್ಹತೆ ಹೊಂದಿದ್ದಾರೆ ಎಂದು ತಿಳಿಸಿದರು.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…