ನವದೆಹಲಿ: ಒಂದೂವರೆ ದಶಕ ಕಳೆದರೂ ಜನಗಣತಿ ನಡೆಸದೇ ಇರುವುದರಿಂದ ದೇಶದ 14 ಕೋಟಿ ಮಂದಿಗೆ ಆಹಾರ ಭದ್ರತೆ ಯೋಜನೆ ನಿರಾಕರಿಸಿದಂತಾಗಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸೋನಿಯಾ ಗಾಂಧಿ, 2013ರಲ್ಲಿ ಯುಪಿಎ ಸರ್ಕಾರ ಜಾರಿ ಮಾಡಿದ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ, ದೇಶದ ಬಡವರ ಹಸಿವು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕೋವಿಡ್-19 ಸಂದರ್ಭದಲ್ಲಿ ಲಕ್ಷಾಂತರ ಕುಟುಂಬಗಳಿಗೆ ಆಸರೆಯಾಗಿದೆ ಎಂದರು.
ಪ್ರತಿ ಹತ್ತು ವರ್ಷಗಳಿಹೊಮ್ಮೆ ನಡೆಯಬೇಕಿದ್ದ ಜನಗಣತಿ ಒಂದೂವರೆ ದಶಕ ಕಳೆದರೂ ನಡೆದಿಲ್ಲ. ಈ ಬಾರಿಯೂ ಕೂಡ ಜನಗಣತಿ ನಡೆಯುವುದಿಲ್ಲ ಎಂಬುದು ಇವರು ಮಂಡಿಸಿದ ಬಜೆಟ್ ಅಂಶಗಳಿಂದ ತಿಳಿಯುತ್ತದೆ.
ಜನಗಣತಿ ನಡೆಯದೆ ಇರುವುದರಿಂದ ಸುಮಾರು 14 ಕೋಟಿ ಅರ್ಹ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯಡಿ (ಎನ್ಎಫ್ಎಸ್ಎ) ಹಕ್ಕು ನಿರಾಕರಿಸಲಾಗುತ್ತಿದೆ. 2011ರ ಜನಗಣತಿಯ ಅನ್ವಯ ಸುಮಾರು 81.4 ಕೋಟಿ ಜನರು ಈ ಸೌಲಭ್ಯಕ್ಕೆ ಅರ್ಹತೆ ಹೊಂದಿದ್ದಾರೆ ಎಂದು ತಿಳಿಸಿದರು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…