ನವದೆಹಲಿ: ಒಂದೂವರೆ ದಶಕ ಕಳೆದರೂ ಜನಗಣತಿ ನಡೆಸದೇ ಇರುವುದರಿಂದ ದೇಶದ 14 ಕೋಟಿ ಮಂದಿಗೆ ಆಹಾರ ಭದ್ರತೆ ಯೋಜನೆ ನಿರಾಕರಿಸಿದಂತಾಗಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸೋನಿಯಾ ಗಾಂಧಿ, 2013ರಲ್ಲಿ ಯುಪಿಎ ಸರ್ಕಾರ ಜಾರಿ ಮಾಡಿದ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ, ದೇಶದ ಬಡವರ ಹಸಿವು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕೋವಿಡ್-19 ಸಂದರ್ಭದಲ್ಲಿ ಲಕ್ಷಾಂತರ ಕುಟುಂಬಗಳಿಗೆ ಆಸರೆಯಾಗಿದೆ ಎಂದರು.
ಪ್ರತಿ ಹತ್ತು ವರ್ಷಗಳಿಹೊಮ್ಮೆ ನಡೆಯಬೇಕಿದ್ದ ಜನಗಣತಿ ಒಂದೂವರೆ ದಶಕ ಕಳೆದರೂ ನಡೆದಿಲ್ಲ. ಈ ಬಾರಿಯೂ ಕೂಡ ಜನಗಣತಿ ನಡೆಯುವುದಿಲ್ಲ ಎಂಬುದು ಇವರು ಮಂಡಿಸಿದ ಬಜೆಟ್ ಅಂಶಗಳಿಂದ ತಿಳಿಯುತ್ತದೆ.
ಜನಗಣತಿ ನಡೆಯದೆ ಇರುವುದರಿಂದ ಸುಮಾರು 14 ಕೋಟಿ ಅರ್ಹ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯಡಿ (ಎನ್ಎಫ್ಎಸ್ಎ) ಹಕ್ಕು ನಿರಾಕರಿಸಲಾಗುತ್ತಿದೆ. 2011ರ ಜನಗಣತಿಯ ಅನ್ವಯ ಸುಮಾರು 81.4 ಕೋಟಿ ಜನರು ಈ ಸೌಲಭ್ಯಕ್ಕೆ ಅರ್ಹತೆ ಹೊಂದಿದ್ದಾರೆ ಎಂದು ತಿಳಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…