ದೇಶ- ವಿದೇಶ

14 ಕೋಟಿ ಮಂದಿಗೆ ಆಹಾರ ಭದ್ರತೆ ಯೋಜನೆ ನಿರಾಕರಣೆ: ಸೋನಿಯಾ ಗಾಂಧಿ

ನವದೆಹಲಿ: ಒಂದೂವರೆ ದಶಕ ಕಳೆದರೂ ಜನಗಣತಿ ನಡೆಸದೇ ಇರುವುದರಿಂದ ದೇಶದ 14 ಕೋಟಿ ಮಂದಿಗೆ ಆಹಾರ ಭದ್ರತೆ ಯೋಜನೆ ನಿರಾಕರಿಸಿದಂತಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸೋನಿಯಾ ಗಾಂಧಿ, 2013ರಲ್ಲಿ ಯುಪಿಎ ಸರ್ಕಾರ ಜಾರಿ ಮಾಡಿದ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ, ದೇಶದ ಬಡವರ ಹಸಿವು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕೋವಿಡ್‌-19 ಸಂದರ್ಭದಲ್ಲಿ ಲಕ್ಷಾಂತರ ಕುಟುಂಬಗಳಿಗೆ ಆಸರೆಯಾಗಿದೆ ಎಂದರು.

ಪ್ರತಿ ಹತ್ತು ವರ್ಷಗಳಿಹೊಮ್ಮೆ ನಡೆಯಬೇಕಿದ್ದ ಜನಗಣತಿ ಒಂದೂವರೆ ದಶಕ ಕಳೆದರೂ ನಡೆದಿಲ್ಲ. ಈ ಬಾರಿಯೂ ಕೂಡ ಜನಗಣತಿ ನಡೆಯುವುದಿಲ್ಲ ಎಂಬುದು ಇವರು ಮಂಡಿಸಿದ ಬಜೆಟ್‌ ಅಂಶಗಳಿಂದ ತಿಳಿಯುತ್ತದೆ.

ಜನಗಣತಿ ನಡೆಯದೆ ಇರುವುದರಿಂದ ಸುಮಾರು 14 ಕೋಟಿ ಅರ್ಹ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯಡಿ (ಎನ್‌ಎಫ್‌ಎಸ್‌ಎ) ಹಕ್ಕು ನಿರಾಕರಿಸಲಾಗುತ್ತಿದೆ. 2011ರ ಜನಗಣತಿಯ ಅನ್ವಯ ಸುಮಾರು 81.4 ಕೋಟಿ ಜನರು ಈ ಸೌಲಭ್ಯಕ್ಕೆ ಅರ್ಹತೆ ಹೊಂದಿದ್ದಾರೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

2 mins ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

2 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

3 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

3 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

4 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

5 hours ago