ದೇಶ- ವಿದೇಶ

ಪೋರ್ಬ್ಸ್‌ 2024 | ವಿಶ್ವದ ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಭಾರತೀಯ ನಾರಿಯರು

ಹೊಸದಿಲ್ಲಿ: ಪೋರ್ಬ್ಸ್‌ ರಾಷ್ಟ್ರೀಯ ವ್ಯಾಪಾರ ನಿಯತಕಾಲಿಕೆಯ ಅತ್ಯಂತ ಪ್ರಬಲ ಸಂಸ್ಥೆಯಾಗಿದೆ. ಪೋರ್ಬ್ಸ್‌ ಈ ವರ್ಷದ (2024) ಅತ್ಯಂತ ಪ್ರಭಾವಶಾಲಿ 100 ಮಂದಿ ಮಹಿಳೆಯರ ಪಟ್ಟಿ ಬಿಡುಗಡೆ. ಅದರಲ್ಲಿ ಭಾರತದ ಮೂವರು ಮಹಿಳೆಯರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಇದರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿಶ್ವದಲ್ಲೇ 28 ನೇ ಸ್ಥಾನದಲ್ಲಿದ್ದು, ಭಾರತದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ನಂತರ ಎಚ್‌ಸಿಎಲ್‌ ಕಾರ್ಪೋರೇಷನ್‌ ಸಿಇಒ ರೋಷನಿ ನಾದರ್‌ ಮಲ್ಹೋತ್ರಾ ಹಾಗೂ ಬಯೋಕಾನ್‌ ಸಂಸ್ಥಾಪಕಿ ಕರಣ್‌ ಮಜುಂದರ್‌ ಷಾ ಈ ಪಟ್ಟಿಯಲ್ಲಿ ಇದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಪೋರ್ಬ್ಸ್‌ ಪಟ್ಟಿಯಲ್ಲಿ 28ನೇ ಸ್ಥಾನದಲ್ಲಿದ್ದಾರೆ. ಹೋದ ವರ್ಷದಲ್ಲಿ 32ನೇ ಶ್ರೆಯಾಂಕ ಪಡೆದಿದ್ದರು. 2024 ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಪ್ರಸ್ತುತ ಹಣಕಾಸು ಮತ್ತು ಕಾರ್ಪೊರೇಟ್‌ ವ್ಯವಹಾರಗಳ ಸಚಿವೆ ಆಗಿರುವ ನಿರ್ಮಲಾ ಸೀತಾರಾಮನ್‌ ಭಾರತದ 4 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.

ರೋಶನಿ ನಾದರ್‌ ಮಲ್ಹೋತ್ರಾ ಅವರು, ಈ ಪಟ್ಟಿಯಲ್ಲಿ 81 ನೇ ಶ್ರೇಯಾಂಕದಲ್ಲಿದ್ದು, ಈ ಪಟ್ಟಿಯಲ್ಲಿ ಸ್ಥಾನ ಪಡೆದ ಎರಡನೇ ಭಾರತೀಯ ಮಹಿಳೆಯಾಗಿದ್ದಾರೆ. ಎಚ್‌ಸಿಎಲ್‌ ಸಂಸ್ಥಾಪಕ ಮತ್ತು ಕೈಗಾರಿಕೋದ್ಯಮಿ ಶಿವ ನಾಡರ್‌ ಅವರ ಪುತ್ರಿಯಾಗಿದ್ದು, ಪ್ರಸ್ತುತ ಈ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ಹಾಗೆಯೇ ಮಲ್ಹೋತ್ರಾ ಅವರು ಶಿವ ನಾಡರ್‌ ಫೌಂಡೇಶನ್‌ನ ಟ್ರಸ್ಟಿಯಾಗಿದ್ದಾರೆ.

ಪೋರ್ಬ್ಸ್‌ನ ಪವರ್‌ವುಲ್‌ ವುಮೆನ್‌ ಪಟ್ಟಿಯಲ್ಲಿ ಕಿರಣ ಮಜುಂದರ್‌ ಶಾ 82 ನೇ ಸ್ಥಾನ ಪಡೆದಿದ್ದಾರೆ. ಭಾರತದ ಶ್ರೀಮಂತ ವ್ಯಕ್ತಿಗಳಲ್ಲಿ 91ನೇ ಸ್ಥಾನವನ್ನು ಪಡೆದಿರುವ ಇವರು ಜೈವಿಕ ತಂತ್ರಜ್ಞಾನದಲ್ಲಿ ಟ್ರಯಲ್‌ಬ್ಲೇಜರ್‌ ಆಗಿದ್ದಾರೆ. 1978ರಲ್ಲಿ ಬಯೋಫಾರ್ಮಾಸ್ಯುಟಿಕಲ್‌ ಬಯೋಕಾನ್‌ ಸಂಸ್ಥೆ ಸ್ಥಾಪಿಸಿದ್ದಾರೆ. ಇದು ಇನ್ಸುಲಿನ್‌ ತಯಾರಿಸುವ ಸಂಸ್ಥೆಯಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…

1 hour ago

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

2 hours ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…

2 hours ago

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

15 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

16 hours ago