ದೇಶ- ವಿದೇಶ

ಪೋರ್ಬ್ಸ್‌ 2024 | ವಿಶ್ವದ ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಭಾರತೀಯ ನಾರಿಯರು

ಹೊಸದಿಲ್ಲಿ: ಪೋರ್ಬ್ಸ್‌ ರಾಷ್ಟ್ರೀಯ ವ್ಯಾಪಾರ ನಿಯತಕಾಲಿಕೆಯ ಅತ್ಯಂತ ಪ್ರಬಲ ಸಂಸ್ಥೆಯಾಗಿದೆ. ಪೋರ್ಬ್ಸ್‌ ಈ ವರ್ಷದ (2024) ಅತ್ಯಂತ ಪ್ರಭಾವಶಾಲಿ 100 ಮಂದಿ ಮಹಿಳೆಯರ ಪಟ್ಟಿ ಬಿಡುಗಡೆ. ಅದರಲ್ಲಿ ಭಾರತದ ಮೂವರು ಮಹಿಳೆಯರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಇದರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿಶ್ವದಲ್ಲೇ 28 ನೇ ಸ್ಥಾನದಲ್ಲಿದ್ದು, ಭಾರತದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ನಂತರ ಎಚ್‌ಸಿಎಲ್‌ ಕಾರ್ಪೋರೇಷನ್‌ ಸಿಇಒ ರೋಷನಿ ನಾದರ್‌ ಮಲ್ಹೋತ್ರಾ ಹಾಗೂ ಬಯೋಕಾನ್‌ ಸಂಸ್ಥಾಪಕಿ ಕರಣ್‌ ಮಜುಂದರ್‌ ಷಾ ಈ ಪಟ್ಟಿಯಲ್ಲಿ ಇದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಪೋರ್ಬ್ಸ್‌ ಪಟ್ಟಿಯಲ್ಲಿ 28ನೇ ಸ್ಥಾನದಲ್ಲಿದ್ದಾರೆ. ಹೋದ ವರ್ಷದಲ್ಲಿ 32ನೇ ಶ್ರೆಯಾಂಕ ಪಡೆದಿದ್ದರು. 2024 ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಪ್ರಸ್ತುತ ಹಣಕಾಸು ಮತ್ತು ಕಾರ್ಪೊರೇಟ್‌ ವ್ಯವಹಾರಗಳ ಸಚಿವೆ ಆಗಿರುವ ನಿರ್ಮಲಾ ಸೀತಾರಾಮನ್‌ ಭಾರತದ 4 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.

ರೋಶನಿ ನಾದರ್‌ ಮಲ್ಹೋತ್ರಾ ಅವರು, ಈ ಪಟ್ಟಿಯಲ್ಲಿ 81 ನೇ ಶ್ರೇಯಾಂಕದಲ್ಲಿದ್ದು, ಈ ಪಟ್ಟಿಯಲ್ಲಿ ಸ್ಥಾನ ಪಡೆದ ಎರಡನೇ ಭಾರತೀಯ ಮಹಿಳೆಯಾಗಿದ್ದಾರೆ. ಎಚ್‌ಸಿಎಲ್‌ ಸಂಸ್ಥಾಪಕ ಮತ್ತು ಕೈಗಾರಿಕೋದ್ಯಮಿ ಶಿವ ನಾಡರ್‌ ಅವರ ಪುತ್ರಿಯಾಗಿದ್ದು, ಪ್ರಸ್ತುತ ಈ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ಹಾಗೆಯೇ ಮಲ್ಹೋತ್ರಾ ಅವರು ಶಿವ ನಾಡರ್‌ ಫೌಂಡೇಶನ್‌ನ ಟ್ರಸ್ಟಿಯಾಗಿದ್ದಾರೆ.

ಪೋರ್ಬ್ಸ್‌ನ ಪವರ್‌ವುಲ್‌ ವುಮೆನ್‌ ಪಟ್ಟಿಯಲ್ಲಿ ಕಿರಣ ಮಜುಂದರ್‌ ಶಾ 82 ನೇ ಸ್ಥಾನ ಪಡೆದಿದ್ದಾರೆ. ಭಾರತದ ಶ್ರೀಮಂತ ವ್ಯಕ್ತಿಗಳಲ್ಲಿ 91ನೇ ಸ್ಥಾನವನ್ನು ಪಡೆದಿರುವ ಇವರು ಜೈವಿಕ ತಂತ್ರಜ್ಞಾನದಲ್ಲಿ ಟ್ರಯಲ್‌ಬ್ಲೇಜರ್‌ ಆಗಿದ್ದಾರೆ. 1978ರಲ್ಲಿ ಬಯೋಫಾರ್ಮಾಸ್ಯುಟಿಕಲ್‌ ಬಯೋಕಾನ್‌ ಸಂಸ್ಥೆ ಸ್ಥಾಪಿಸಿದ್ದಾರೆ. ಇದು ಇನ್ಸುಲಿನ್‌ ತಯಾರಿಸುವ ಸಂಸ್ಥೆಯಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

44 mins ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

59 mins ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

1 hour ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

2 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

3 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

3 hours ago