ದೇಶ- ವಿದೇಶ

ಪೋರ್ಬ್ಸ್‌ 2024 | ವಿಶ್ವದ ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಭಾರತೀಯ ನಾರಿಯರು

ಹೊಸದಿಲ್ಲಿ: ಪೋರ್ಬ್ಸ್‌ ರಾಷ್ಟ್ರೀಯ ವ್ಯಾಪಾರ ನಿಯತಕಾಲಿಕೆಯ ಅತ್ಯಂತ ಪ್ರಬಲ ಸಂಸ್ಥೆಯಾಗಿದೆ. ಪೋರ್ಬ್ಸ್‌ ಈ ವರ್ಷದ (2024) ಅತ್ಯಂತ ಪ್ರಭಾವಶಾಲಿ 100 ಮಂದಿ ಮಹಿಳೆಯರ ಪಟ್ಟಿ ಬಿಡುಗಡೆ. ಅದರಲ್ಲಿ ಭಾರತದ ಮೂವರು ಮಹಿಳೆಯರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಇದರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿಶ್ವದಲ್ಲೇ 28 ನೇ ಸ್ಥಾನದಲ್ಲಿದ್ದು, ಭಾರತದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ನಂತರ ಎಚ್‌ಸಿಎಲ್‌ ಕಾರ್ಪೋರೇಷನ್‌ ಸಿಇಒ ರೋಷನಿ ನಾದರ್‌ ಮಲ್ಹೋತ್ರಾ ಹಾಗೂ ಬಯೋಕಾನ್‌ ಸಂಸ್ಥಾಪಕಿ ಕರಣ್‌ ಮಜುಂದರ್‌ ಷಾ ಈ ಪಟ್ಟಿಯಲ್ಲಿ ಇದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಪೋರ್ಬ್ಸ್‌ ಪಟ್ಟಿಯಲ್ಲಿ 28ನೇ ಸ್ಥಾನದಲ್ಲಿದ್ದಾರೆ. ಹೋದ ವರ್ಷದಲ್ಲಿ 32ನೇ ಶ್ರೆಯಾಂಕ ಪಡೆದಿದ್ದರು. 2024 ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಪ್ರಸ್ತುತ ಹಣಕಾಸು ಮತ್ತು ಕಾರ್ಪೊರೇಟ್‌ ವ್ಯವಹಾರಗಳ ಸಚಿವೆ ಆಗಿರುವ ನಿರ್ಮಲಾ ಸೀತಾರಾಮನ್‌ ಭಾರತದ 4 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.

ರೋಶನಿ ನಾದರ್‌ ಮಲ್ಹೋತ್ರಾ ಅವರು, ಈ ಪಟ್ಟಿಯಲ್ಲಿ 81 ನೇ ಶ್ರೇಯಾಂಕದಲ್ಲಿದ್ದು, ಈ ಪಟ್ಟಿಯಲ್ಲಿ ಸ್ಥಾನ ಪಡೆದ ಎರಡನೇ ಭಾರತೀಯ ಮಹಿಳೆಯಾಗಿದ್ದಾರೆ. ಎಚ್‌ಸಿಎಲ್‌ ಸಂಸ್ಥಾಪಕ ಮತ್ತು ಕೈಗಾರಿಕೋದ್ಯಮಿ ಶಿವ ನಾಡರ್‌ ಅವರ ಪುತ್ರಿಯಾಗಿದ್ದು, ಪ್ರಸ್ತುತ ಈ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ಹಾಗೆಯೇ ಮಲ್ಹೋತ್ರಾ ಅವರು ಶಿವ ನಾಡರ್‌ ಫೌಂಡೇಶನ್‌ನ ಟ್ರಸ್ಟಿಯಾಗಿದ್ದಾರೆ.

ಪೋರ್ಬ್ಸ್‌ನ ಪವರ್‌ವುಲ್‌ ವುಮೆನ್‌ ಪಟ್ಟಿಯಲ್ಲಿ ಕಿರಣ ಮಜುಂದರ್‌ ಶಾ 82 ನೇ ಸ್ಥಾನ ಪಡೆದಿದ್ದಾರೆ. ಭಾರತದ ಶ್ರೀಮಂತ ವ್ಯಕ್ತಿಗಳಲ್ಲಿ 91ನೇ ಸ್ಥಾನವನ್ನು ಪಡೆದಿರುವ ಇವರು ಜೈವಿಕ ತಂತ್ರಜ್ಞಾನದಲ್ಲಿ ಟ್ರಯಲ್‌ಬ್ಲೇಜರ್‌ ಆಗಿದ್ದಾರೆ. 1978ರಲ್ಲಿ ಬಯೋಫಾರ್ಮಾಸ್ಯುಟಿಕಲ್‌ ಬಯೋಕಾನ್‌ ಸಂಸ್ಥೆ ಸ್ಥಾಪಿಸಿದ್ದಾರೆ. ಇದು ಇನ್ಸುಲಿನ್‌ ತಯಾರಿಸುವ ಸಂಸ್ಥೆಯಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

29 mins ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

52 mins ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

1 hour ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

2 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

5 hours ago