ದೇಶ- ವಿದೇಶ

ಪೋರ್ಬ್ಸ್‌ 2024 | ವಿಶ್ವದ ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಭಾರತೀಯ ನಾರಿಯರು

ಹೊಸದಿಲ್ಲಿ: ಪೋರ್ಬ್ಸ್‌ ರಾಷ್ಟ್ರೀಯ ವ್ಯಾಪಾರ ನಿಯತಕಾಲಿಕೆಯ ಅತ್ಯಂತ ಪ್ರಬಲ ಸಂಸ್ಥೆಯಾಗಿದೆ. ಪೋರ್ಬ್ಸ್‌ ಈ ವರ್ಷದ (2024) ಅತ್ಯಂತ ಪ್ರಭಾವಶಾಲಿ 100 ಮಂದಿ ಮಹಿಳೆಯರ ಪಟ್ಟಿ ಬಿಡುಗಡೆ. ಅದರಲ್ಲಿ ಭಾರತದ ಮೂವರು ಮಹಿಳೆಯರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಇದರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿಶ್ವದಲ್ಲೇ 28 ನೇ ಸ್ಥಾನದಲ್ಲಿದ್ದು, ಭಾರತದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ನಂತರ ಎಚ್‌ಸಿಎಲ್‌ ಕಾರ್ಪೋರೇಷನ್‌ ಸಿಇಒ ರೋಷನಿ ನಾದರ್‌ ಮಲ್ಹೋತ್ರಾ ಹಾಗೂ ಬಯೋಕಾನ್‌ ಸಂಸ್ಥಾಪಕಿ ಕರಣ್‌ ಮಜುಂದರ್‌ ಷಾ ಈ ಪಟ್ಟಿಯಲ್ಲಿ ಇದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಪೋರ್ಬ್ಸ್‌ ಪಟ್ಟಿಯಲ್ಲಿ 28ನೇ ಸ್ಥಾನದಲ್ಲಿದ್ದಾರೆ. ಹೋದ ವರ್ಷದಲ್ಲಿ 32ನೇ ಶ್ರೆಯಾಂಕ ಪಡೆದಿದ್ದರು. 2024 ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಪ್ರಸ್ತುತ ಹಣಕಾಸು ಮತ್ತು ಕಾರ್ಪೊರೇಟ್‌ ವ್ಯವಹಾರಗಳ ಸಚಿವೆ ಆಗಿರುವ ನಿರ್ಮಲಾ ಸೀತಾರಾಮನ್‌ ಭಾರತದ 4 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.

ರೋಶನಿ ನಾದರ್‌ ಮಲ್ಹೋತ್ರಾ ಅವರು, ಈ ಪಟ್ಟಿಯಲ್ಲಿ 81 ನೇ ಶ್ರೇಯಾಂಕದಲ್ಲಿದ್ದು, ಈ ಪಟ್ಟಿಯಲ್ಲಿ ಸ್ಥಾನ ಪಡೆದ ಎರಡನೇ ಭಾರತೀಯ ಮಹಿಳೆಯಾಗಿದ್ದಾರೆ. ಎಚ್‌ಸಿಎಲ್‌ ಸಂಸ್ಥಾಪಕ ಮತ್ತು ಕೈಗಾರಿಕೋದ್ಯಮಿ ಶಿವ ನಾಡರ್‌ ಅವರ ಪುತ್ರಿಯಾಗಿದ್ದು, ಪ್ರಸ್ತುತ ಈ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ಹಾಗೆಯೇ ಮಲ್ಹೋತ್ರಾ ಅವರು ಶಿವ ನಾಡರ್‌ ಫೌಂಡೇಶನ್‌ನ ಟ್ರಸ್ಟಿಯಾಗಿದ್ದಾರೆ.

ಪೋರ್ಬ್ಸ್‌ನ ಪವರ್‌ವುಲ್‌ ವುಮೆನ್‌ ಪಟ್ಟಿಯಲ್ಲಿ ಕಿರಣ ಮಜುಂದರ್‌ ಶಾ 82 ನೇ ಸ್ಥಾನ ಪಡೆದಿದ್ದಾರೆ. ಭಾರತದ ಶ್ರೀಮಂತ ವ್ಯಕ್ತಿಗಳಲ್ಲಿ 91ನೇ ಸ್ಥಾನವನ್ನು ಪಡೆದಿರುವ ಇವರು ಜೈವಿಕ ತಂತ್ರಜ್ಞಾನದಲ್ಲಿ ಟ್ರಯಲ್‌ಬ್ಲೇಜರ್‌ ಆಗಿದ್ದಾರೆ. 1978ರಲ್ಲಿ ಬಯೋಫಾರ್ಮಾಸ್ಯುಟಿಕಲ್‌ ಬಯೋಕಾನ್‌ ಸಂಸ್ಥೆ ಸ್ಥಾಪಿಸಿದ್ದಾರೆ. ಇದು ಇನ್ಸುಲಿನ್‌ ತಯಾರಿಸುವ ಸಂಸ್ಥೆಯಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

2 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

3 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

3 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

4 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

4 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

5 hours ago