ದೇಶ- ವಿದೇಶ

2024ರ ವಿಶ್ವ ಶ್ರೀಮಂತರ ಪಟ್ಟಿ ಬಿಡುಗಡೆಗೊಳಿಸಿದ ಫೋರ್ಬ್ಸ್;‌ ಮುಖೇಶ್‌ ಅಂಬಾನಿಗೆ ಎಷ್ಟನೇ ಸ್ಥಾನ?

ಪ್ರತಿಷ್ಟಿತ ನಿಯತಕಾಲಿಕ ಫೋರ್ಬ್ಸ್‌ ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಶ್ವದ ಅತ್ಯಂತ ಶ್ರೀಮಂತರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಫ್ರಾನ್ಸ್‌ನ ಬರ್ನಾರ್ಡ್‌ ಅನೌಲ್ಟ್‌ ಅಂಡ್‌ ಫ್ಯಾಮಿಲಿ ಒಟ್ಟು 233 ಬಿಲಿಯನ್‌ ಡಾಲರ್‌ಗಳೊಂದಿಗೆ ಅಗ್ರಸ್ಥಾದಲ್ಲಿದ್ದರೆ, ಎಲನ್‌ ಮಸ್ಕ್‌ 195 ಬಿಲಿಯನ್‌ ಡಾಲರ್‌ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಇನ್ನು ಈ ಬಾರಿಯ ಪಟ್ಟಿಯಲ್ಲಿ ಒಟ್ಟು 200 ಭಾರತೀಯರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಕಳೆದ ವರ್ಷ 169 ಭಾರತೀಯ ಬಿಲಿಯನೇರ್‌ಗಳಿದ್ದರು. ಈ ಬಾರಿ ಒಟ್ಟು 31 ಬಿಲಿಯನೇರ್‌ಗಳು ಈ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ.

ಇನ್ನು ಭಾರತೀಯರಲ್ಲಿ ಮುಖೇಶ್‌ ಅಂಬಾನಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ. 116 ಬಿಲಿಯನ್‌ ಡಾಲರ್‌ ಹೊಂದಿರುವ ಮುಖೇಶ್‌ ಅಂಬಾನಿ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದಾರೆ. ಕಳೆದ ಬಾರಿ 83 ಬಿಲಿಯನ್ ಡಾಲರ್‌ಗಳನ್ನು ಹೊಂದಿದ್ದ ಮುಖೇಶ್‌ ಅಂಬಾನಿ ಈ ಬಾರಿ ನೂರು ಬಿಲಿಯನ್‌ ಡಾಲರ್‌ ಕ್ಲಬ್‌ ಸೇರಿದ್ದು, ದೇಶದ ಹಾಗೂ ಏಷ್ಯಾದ ಅತಿದೊಡ್ಡ ಶ್ರೀಮಂತ ಎನಿಸಿಕೊಂಡಿದ್ದಾರೆ.

ಭಾರತದ ಅತ್ಯಂತ ಹೆಚ್ಚು ಶ್ರೀಮಂತರ ಪಟ್ಟಿ: ಟಾಪ್‌ 10

ಮುಖೇಶ್‌ ಅಂಬಾನಿ – 116 ಬಿಲಿಯನ್‌ ಡಾಲರ್‌
ಗೌತಮ್‌ ಅದಾನಿ – 82 ಬಿಲಿಯನ್‌ ಡಾಲರ್‌
ಶಿವ ನಡಾರ್‌ – 36.9 ಬಿಲಿಯನ್‌ ಡಾಲರ್‌
ಸಾವಿತ್ರಿ ಜಿಂದಾಲ್‌ – 33.5 ಬಿಲಿಯನ್‌ ಡಾಲರ್‌
ದಿಲೀಪ್‌ ಸಾಂಘವಿ – 26.7 ಬಿಲಿಯನ್‌ ಡಾಲರ್‌
ಸೈರಸ್‌ ಪೂನಾವಾಲಾ – 21.3 ಬಿಲಿಯನ್‌ ಡಾಲರ್‌
ಕುಶಾಲ್‌ ಪಾಲ್‌ ಸಿಂಗ್‌ – 20.9 ಬಿಲಿಯನ್‌ ಡಾಲರ್‌
ಕುಮಾರ್‌ ಬಿರ್ಲಾ – 19.7 ಬಿಲಿಯನ್‌ ಡಾಲರ್‌
ರಾಧಾಕೃಷ್ಣನ್‌ ದಮನಿ – 17.6 ಬಿಲಿಯನ್‌ ಡಾಲರ್‌
ಲಕ್ಷ್ಮಿ ಮಿತ್ತಲ್‌ – 16.4 ಬಿಲಿಯನ್‌ ಡಾಲರ್‌

 

andolana

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

15 mins ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

37 mins ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

2 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

3 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

4 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

7 hours ago