ದೇಶ- ವಿದೇಶ

2024ರ ವಿಶ್ವ ಶ್ರೀಮಂತರ ಪಟ್ಟಿ ಬಿಡುಗಡೆಗೊಳಿಸಿದ ಫೋರ್ಬ್ಸ್;‌ ಮುಖೇಶ್‌ ಅಂಬಾನಿಗೆ ಎಷ್ಟನೇ ಸ್ಥಾನ?

ಪ್ರತಿಷ್ಟಿತ ನಿಯತಕಾಲಿಕ ಫೋರ್ಬ್ಸ್‌ ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಶ್ವದ ಅತ್ಯಂತ ಶ್ರೀಮಂತರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಫ್ರಾನ್ಸ್‌ನ ಬರ್ನಾರ್ಡ್‌ ಅನೌಲ್ಟ್‌ ಅಂಡ್‌ ಫ್ಯಾಮಿಲಿ ಒಟ್ಟು 233 ಬಿಲಿಯನ್‌ ಡಾಲರ್‌ಗಳೊಂದಿಗೆ ಅಗ್ರಸ್ಥಾದಲ್ಲಿದ್ದರೆ, ಎಲನ್‌ ಮಸ್ಕ್‌ 195 ಬಿಲಿಯನ್‌ ಡಾಲರ್‌ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಇನ್ನು ಈ ಬಾರಿಯ ಪಟ್ಟಿಯಲ್ಲಿ ಒಟ್ಟು 200 ಭಾರತೀಯರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಕಳೆದ ವರ್ಷ 169 ಭಾರತೀಯ ಬಿಲಿಯನೇರ್‌ಗಳಿದ್ದರು. ಈ ಬಾರಿ ಒಟ್ಟು 31 ಬಿಲಿಯನೇರ್‌ಗಳು ಈ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ.

ಇನ್ನು ಭಾರತೀಯರಲ್ಲಿ ಮುಖೇಶ್‌ ಅಂಬಾನಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ. 116 ಬಿಲಿಯನ್‌ ಡಾಲರ್‌ ಹೊಂದಿರುವ ಮುಖೇಶ್‌ ಅಂಬಾನಿ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದಾರೆ. ಕಳೆದ ಬಾರಿ 83 ಬಿಲಿಯನ್ ಡಾಲರ್‌ಗಳನ್ನು ಹೊಂದಿದ್ದ ಮುಖೇಶ್‌ ಅಂಬಾನಿ ಈ ಬಾರಿ ನೂರು ಬಿಲಿಯನ್‌ ಡಾಲರ್‌ ಕ್ಲಬ್‌ ಸೇರಿದ್ದು, ದೇಶದ ಹಾಗೂ ಏಷ್ಯಾದ ಅತಿದೊಡ್ಡ ಶ್ರೀಮಂತ ಎನಿಸಿಕೊಂಡಿದ್ದಾರೆ.

ಭಾರತದ ಅತ್ಯಂತ ಹೆಚ್ಚು ಶ್ರೀಮಂತರ ಪಟ್ಟಿ: ಟಾಪ್‌ 10

ಮುಖೇಶ್‌ ಅಂಬಾನಿ – 116 ಬಿಲಿಯನ್‌ ಡಾಲರ್‌
ಗೌತಮ್‌ ಅದಾನಿ – 82 ಬಿಲಿಯನ್‌ ಡಾಲರ್‌
ಶಿವ ನಡಾರ್‌ – 36.9 ಬಿಲಿಯನ್‌ ಡಾಲರ್‌
ಸಾವಿತ್ರಿ ಜಿಂದಾಲ್‌ – 33.5 ಬಿಲಿಯನ್‌ ಡಾಲರ್‌
ದಿಲೀಪ್‌ ಸಾಂಘವಿ – 26.7 ಬಿಲಿಯನ್‌ ಡಾಲರ್‌
ಸೈರಸ್‌ ಪೂನಾವಾಲಾ – 21.3 ಬಿಲಿಯನ್‌ ಡಾಲರ್‌
ಕುಶಾಲ್‌ ಪಾಲ್‌ ಸಿಂಗ್‌ – 20.9 ಬಿಲಿಯನ್‌ ಡಾಲರ್‌
ಕುಮಾರ್‌ ಬಿರ್ಲಾ – 19.7 ಬಿಲಿಯನ್‌ ಡಾಲರ್‌
ರಾಧಾಕೃಷ್ಣನ್‌ ದಮನಿ – 17.6 ಬಿಲಿಯನ್‌ ಡಾಲರ್‌
ಲಕ್ಷ್ಮಿ ಮಿತ್ತಲ್‌ – 16.4 ಬಿಲಿಯನ್‌ ಡಾಲರ್‌

 

andolana

Recent Posts

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

17 mins ago

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

43 mins ago

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

1 hour ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

3 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

3 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago