ದೇಶ- ವಿದೇಶ

ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿರ: ಮಹಾರಾಷ್ಟ್ರ ಸಚಿವರಿಂದ ಮಾಹಿತಿ

ಠಾಣೆ: ಭಾರತ ಕ್ರಿಕೆಟ್‌ ತಂಡ ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಮಹಾರಾಷ್ಟ್ರದ ಸಾರಿಗೆ ಸಚಿವ ಪ್ರತಾಪ್‌ ಸರ್‌ ನಾಯಿಕ್‌ ಅವರು ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಬ್ಳಿ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಕಾಂಬ್ಳೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದರು.

ಇನ್ನು ಕಾಂಬ್ಳೆ ಅವರಿಗೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿದ ಮಹಾರಾಷ್ಟ್ರ ಸಚಿವರು, ಕಾಂಬ್ಳಿ ಅವರು ಸದಾ ತಮ್ಮ ಪ್ರದರ್ಶನದಿಂದ ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ. ಅವರ ಕಣ್ಣುಗಳು ಈಗಲೂ ಮೈದಾನದಲ್ಲಿದ್ದ ದೃಢತೆ ಮತ್ತು ಹೋರಾಟದ ಮನೋಭಾವವನ್ನು ಪ್ರತಿಬಿಂಬಿಸುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ನಾನು ಕಾಂಬ್ಳಿ ಅವರ ಕುಟುಂಬದವರ ಜೊತೆಗೂ ಮಾತನಾಡಿದ್ದೇನೆ. ಅವರಿಗೆ ಉತ್ತಮ ವೈದ್ಯಕೀಯ ನೆರವು ಒದಗಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

59 seconds ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

3 mins ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

39 mins ago

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

1 hour ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

2 hours ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

2 hours ago