ದೇಶ- ವಿದೇಶ

3000 ರೂಗೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಸಚಿವೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ತಿಂಗಳಿಗೆ ಕೇವಲ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಪಶ್ಚಿಮ ಬಂಗಾಳದ ಆಸ್ಗ್ರಾಮ್‌ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿ ಇದೀಗ ಸುವೇಂದು ಸರ್ಕಾರದಲ್ಲಿ ಸಚಿವೆಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಗುಸ್ಕಾರ ಪುರಸಭೆ ನಿವಾಸಿಯಾಗಿರುವ ಮಾಝಿ, ಸಕ್ರಿಯ ರಾಜಕೀಯಕ್ಕೆ ಕಾಲಿಡುವ ಮೊದಲು ನಾಲ್ಕು ಮನೆಗಳಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಸಾಧಾರಣ ಹಿನ್ನೆಲೆ ಮತ್ತು ಬಲವಾದ ಸ್ಥಳೀಯ ಸಂಪರ್ಕಗಳಿಗಾಗಿ ಪ್ರಚಾರದ ಸಮಯದಲ್ಲಿ ಅವರ ಉಮೇದುವಾರಿಕೆ ಗಮನ ಸೆಳೆಯಿತು.

ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಮಾಝಿ, ನಾನು ತುಂಬಾ ಸಂತೋಷವಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಕೃತಜ್ಞನಾಗಿದ್ದೆನೆ. ನಾನು ಇಂದು ನನ್ನ ಈ ಗೆಲುವನ್ನು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡುತ್ತೇನೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೆಲಸ ಮಾಡುವುದು ಮತ್ತು ಸರಿಯಾದ ರಸ್ತೆಗಳು ಮತ್ತು ಕುಡಿಯುವ ನೀರು ಎಲ್ಲರ ಮನೆಗಳಿಗೆ ತಲುಪುವಂತೆ ನೋಡಿಕೊಳ್ಳುವುದು ನನ್ನ ಮುಖ್ಯ ಗುರಿಯಾಗಿದೆ. ಯುವಕರ ಅಭಿವೃದ್ಧಿ ಮತ್ತು ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗಾಗಿಯೂ ನಾನು ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

 

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

50 mins ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

1 hour ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

3 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

3 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

3 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

11 hours ago