ದೇಶ- ವಿದೇಶ

ಜಮ್ಮು-ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್‌ ಆರೋಗ್ಯದಲ್ಲಿ ಏರುಪೇರು

ಕುವೈತ್: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರಾಗಿದೆ.

ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಜತೆ ಆಜಾದ್ ಕುವೈತ್‍ಗೆ ತೆರಳಿದ್ದರು. ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನದ ಬಣ್ಣವನ್ನು ಜಗತ್ತಿನ ಮುಂದೆ ಬಯಲು ಮಾಡಲು ಗಲ್ಫ್ ರಾಷ್ಟ್ರಗಳಿಗೆ ಬಿಜೆಪಿ ಸಂಸದ ಬೈಜಯಂತ್ ಪಾಂಡಾ ನೇತೃತ್ವದ ಆಯೋಗ ಭೇಟಿ ನೀಡುತ್ತಿದೆ. ಕುವೈತ್‍ನಲ್ಲಿ ಆಜಾದ್ ಅವರ ಆರೋಗ್ಯ ಕೈಕೊಟ್ಟಿದ್ದು, ಈಗ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಈ ಬಗ್ಗ ಎಸಂಸದ ಪಾಂಡಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಂಸದ ಬೈಜಯಂತ್ ಜೈ ಪಾಂಡಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ನಮ್ಮ ನಿಯೋಗದ ಪ್ರವಾಸದ ಅರ್ಧದಾರಿಯಲ್ಲೇ ಗುಲಾಂ ನಬಿ ಆಜಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು ಎಂದು ಹೇಳಿದ್ದಾರೆ.

ಅವರ ಸ್ಥಿತಿ ಸ್ಥಿರವಾಗಿದೆ. ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಅವರಿಗೆ ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುವುದು. ಇದರೊಂದಿಗೆ, ಬಹ್ರೇನ್ ಮತ್ತು ಕುವೈತ್‍ನಲ್ಲಿ ನಡೆದ ಸಭೆಗಳಲ್ಲಿ ಅವರ ಕೊಡುಗೆ ಅತ್ಯಂತ ಪ್ರಭಾವಶಾಲಿಯಾಗಿತ್ತು. ಸೌದಿ ಅರೇಬಿಯಾ ಮತ್ತು ಅಲ್ಜೀರಿಯಾದಲ್ಲಿ ಅವರ ಅನುಪಸ್ಥಿತಿ ಬೇಸರವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿರುವ ಗುಲಾಂ ನಬಿ ಆಜಾದ್, ಕುವೈತ್‍ನಲ್ಲಿನ ತೀವ್ರ ಶಾಖದಿಂದಾಗಿ ನನ್ನ ಆರೋಗ್ಯದ ಮೇಲೆ ಪರಿಣಾಮ ಬೀರಿದ್ದರೂ, ದೇವರ ದಯೆಯಿಂದ ನಾನು ಚೆನ್ನಾಗಿದ್ದೇನೆ. ಎಲ್ಲಾ ಪರೀಕ್ಷೆಗಳ ಫಲಿತಾಂಶಗಳು ಸಾಮಾನ್ಯವಾಗಿವೆ. ನಿಮ್ಮ ಕಾಳಜಿ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

41 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

51 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

1 hour ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

1 hour ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

1 hour ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

2 hours ago