cm gulam nabi
ಕುವೈತ್: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರಾಗಿದೆ.
ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಜತೆ ಆಜಾದ್ ಕುವೈತ್ಗೆ ತೆರಳಿದ್ದರು. ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನದ ಬಣ್ಣವನ್ನು ಜಗತ್ತಿನ ಮುಂದೆ ಬಯಲು ಮಾಡಲು ಗಲ್ಫ್ ರಾಷ್ಟ್ರಗಳಿಗೆ ಬಿಜೆಪಿ ಸಂಸದ ಬೈಜಯಂತ್ ಪಾಂಡಾ ನೇತೃತ್ವದ ಆಯೋಗ ಭೇಟಿ ನೀಡುತ್ತಿದೆ. ಕುವೈತ್ನಲ್ಲಿ ಆಜಾದ್ ಅವರ ಆರೋಗ್ಯ ಕೈಕೊಟ್ಟಿದ್ದು, ಈಗ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಈ ಬಗ್ಗ ಎಸಂಸದ ಪಾಂಡಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಸಂಸದ ಬೈಜಯಂತ್ ಜೈ ಪಾಂಡಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ನಮ್ಮ ನಿಯೋಗದ ಪ್ರವಾಸದ ಅರ್ಧದಾರಿಯಲ್ಲೇ ಗುಲಾಂ ನಬಿ ಆಜಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು ಎಂದು ಹೇಳಿದ್ದಾರೆ.
ಅವರ ಸ್ಥಿತಿ ಸ್ಥಿರವಾಗಿದೆ. ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಅವರಿಗೆ ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುವುದು. ಇದರೊಂದಿಗೆ, ಬಹ್ರೇನ್ ಮತ್ತು ಕುವೈತ್ನಲ್ಲಿ ನಡೆದ ಸಭೆಗಳಲ್ಲಿ ಅವರ ಕೊಡುಗೆ ಅತ್ಯಂತ ಪ್ರಭಾವಶಾಲಿಯಾಗಿತ್ತು. ಸೌದಿ ಅರೇಬಿಯಾ ಮತ್ತು ಅಲ್ಜೀರಿಯಾದಲ್ಲಿ ಅವರ ಅನುಪಸ್ಥಿತಿ ಬೇಸರವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿರುವ ಗುಲಾಂ ನಬಿ ಆಜಾದ್, ಕುವೈತ್ನಲ್ಲಿನ ತೀವ್ರ ಶಾಖದಿಂದಾಗಿ ನನ್ನ ಆರೋಗ್ಯದ ಮೇಲೆ ಪರಿಣಾಮ ಬೀರಿದ್ದರೂ, ದೇವರ ದಯೆಯಿಂದ ನಾನು ಚೆನ್ನಾಗಿದ್ದೇನೆ. ಎಲ್ಲಾ ಪರೀಕ್ಷೆಗಳ ಫಲಿತಾಂಶಗಳು ಸಾಮಾನ್ಯವಾಗಿವೆ. ನಿಮ್ಮ ಕಾಳಜಿ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…