ದೇಶ- ವಿದೇಶ

ಜಮ್ಮು-ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್‌ ಆರೋಗ್ಯದಲ್ಲಿ ಏರುಪೇರು

ಕುವೈತ್: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರಾಗಿದೆ.

ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಜತೆ ಆಜಾದ್ ಕುವೈತ್‍ಗೆ ತೆರಳಿದ್ದರು. ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನದ ಬಣ್ಣವನ್ನು ಜಗತ್ತಿನ ಮುಂದೆ ಬಯಲು ಮಾಡಲು ಗಲ್ಫ್ ರಾಷ್ಟ್ರಗಳಿಗೆ ಬಿಜೆಪಿ ಸಂಸದ ಬೈಜಯಂತ್ ಪಾಂಡಾ ನೇತೃತ್ವದ ಆಯೋಗ ಭೇಟಿ ನೀಡುತ್ತಿದೆ. ಕುವೈತ್‍ನಲ್ಲಿ ಆಜಾದ್ ಅವರ ಆರೋಗ್ಯ ಕೈಕೊಟ್ಟಿದ್ದು, ಈಗ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಈ ಬಗ್ಗ ಎಸಂಸದ ಪಾಂಡಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಂಸದ ಬೈಜಯಂತ್ ಜೈ ಪಾಂಡಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ನಮ್ಮ ನಿಯೋಗದ ಪ್ರವಾಸದ ಅರ್ಧದಾರಿಯಲ್ಲೇ ಗುಲಾಂ ನಬಿ ಆಜಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು ಎಂದು ಹೇಳಿದ್ದಾರೆ.

ಅವರ ಸ್ಥಿತಿ ಸ್ಥಿರವಾಗಿದೆ. ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಅವರಿಗೆ ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುವುದು. ಇದರೊಂದಿಗೆ, ಬಹ್ರೇನ್ ಮತ್ತು ಕುವೈತ್‍ನಲ್ಲಿ ನಡೆದ ಸಭೆಗಳಲ್ಲಿ ಅವರ ಕೊಡುಗೆ ಅತ್ಯಂತ ಪ್ರಭಾವಶಾಲಿಯಾಗಿತ್ತು. ಸೌದಿ ಅರೇಬಿಯಾ ಮತ್ತು ಅಲ್ಜೀರಿಯಾದಲ್ಲಿ ಅವರ ಅನುಪಸ್ಥಿತಿ ಬೇಸರವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿರುವ ಗುಲಾಂ ನಬಿ ಆಜಾದ್, ಕುವೈತ್‍ನಲ್ಲಿನ ತೀವ್ರ ಶಾಖದಿಂದಾಗಿ ನನ್ನ ಆರೋಗ್ಯದ ಮೇಲೆ ಪರಿಣಾಮ ಬೀರಿದ್ದರೂ, ದೇವರ ದಯೆಯಿಂದ ನಾನು ಚೆನ್ನಾಗಿದ್ದೇನೆ. ಎಲ್ಲಾ ಪರೀಕ್ಷೆಗಳ ಫಲಿತಾಂಶಗಳು ಸಾಮಾನ್ಯವಾಗಿವೆ. ನಿಮ್ಮ ಕಾಳಜಿ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

1 hour ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

3 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

5 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

6 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

7 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

7 hours ago