ದೇಶ- ವಿದೇಶ

ರಾಜೀನಾಮೆಗೆ ಕಾರಣ ನೀಡಿದ ನೇಪಾಳ ಮಾಜಿ ಪ್ರಧಾನಿ ಕೆ.ಪಿ.ಓಲಿ

ಕಠ್ಮಂಡು: ಮಾರ್ಯಾದಾ ಪುರೋಷತ್ತಮ ಶ್ರೀರಾಮನ ಬಗ್ಗೆ ನಾನು ಲಘುವಾಗಿ ಮಾತನಾಡಿದ್ದಕ್ಕೆ ಅಧಿಕಾರ ಕಳೆದುಕೊಳ್ಳುವಂತಾಯಿತು ಎಂದು ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಓಲಿ ಅಲವತ್ತುಕೊಂಡಿದ್ದಾರೆ. ಈ ಮೂಲಕ ನೇಪಾಳದ ಪ್ರತಿಭಟನೆಯ ಹಿಂದೆ ಭಾರತದ ಕೈವಾಡವಿದೆ ಎಂದು ಬಿಂಬಿಸಲು ಯತ್ನಿಸಿದ್ದಾರೆ.

ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ತಮ್ಮ ದೇಶದಿಂದ ಪಲಾಯನ ಮಾಡಿದ ನಂತರ, ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಅವರು, ಪ್ರಸ್ತುತ ನೇಪಾಳ ಸೇನೆಯ ಶಿವಪುರಿ ಬ್ಯಾರಕ್‍ನಲ್ಲಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ತಮ್ಮ ದೇಶವನ್ನು ಆವರಿಸಿರುವ ಹಿಂಸಾಚಾರ ಅಥವಾ ಪ್ರತಿಭಟನೆಗಳಿಗೆ ಕಾರಣವಾದ ಸಾಮಾಜಿಕ ಮಾಧ್ಯಮ ನಿಷೇಧಕ್ಕೆ ಪ್ರತಿಕ್ರಿಯಿಸದ ಓಲಿ, ಅಯೋಧ್ಯೆಯಲ್ಲಿ ರಾಮನ ಜನನವನ್ನು ವಿರೋಧಿಸಿದ್ದರಿಂದ ಅಧಿಕಾರ ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಮೇರಿಕಾದಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಪ್ತಮಿತ್ರನ ಹತ್ಯೆ

ಲಿಪುಲೇಖ್, ಕಲಾಪಾನಿ ಮತ್ತು ಲಿಂಪಿಯಾಧುರಾ – ನೇಪಾಳವು ಭಾರತದೊಂದಿಗೆ ವಿವಾದಿತ ಪ್ರದೇಶವೆಂದು ಹೇಳಿಕೊಳ್ಳುವ ವಿಷಯವನ್ನು ಎತ್ತದಿದ್ದರೆ ನಾನು ಅಧಿಕಾರದಲ್ಲಿ ಉಳಿಯುತ್ತಿದ್ದೆ. ಈ ಎರಡೂ ಪ್ರದೇಶಗಳು ನೇಪಾಳಕ್ಕೆ ಸೇರಿವೆ ಎಂದು ನಾನು ಒತ್ತಾಯಿಸಿದೆ. ಅದೇ ಒತ್ತಾಯದಿಂದಲೇ ನಾನು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಮಾಧ್ಯಮ ಕಂಪನಿಗಳು ನಮ್ಮ ನಿಯಮಗಳನ್ನು ಪಾಲಿಸಬೇಕು ಮತ್ತು ಸ್ಥಳೀಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದೇ ನನಗೆ ಮುಳುವಾಯಿತು ಎಂದು ಪತ್ರದಲ್ಲಿ ಬರೆದಿದ್ದಾರೆ.

ಸ್ವಭಾವತಃ ನಾನು ಸ್ವಲ್ಪ ಹಠಮಾರಿ. ಆ ಹಠಮಾರಿತನ ಇಲ್ಲದಿದ್ದರೆ ಬಹುಶಃ ಈ ಎಲ್ಲಾ ಸವಾಲುಗಳ ನಡುವೆ ನಾನು ಬಹಳ ಹಿಂದೆಯೇ ಅಧಿಕಾರವನ್ನು ಬಿಟ್ಟುಕೊಡುತ್ತಿದ್ದೆ. ಹಠಮಾರಿ ಧೋರಣೆಯಿಂದಾಗಿ ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಮಾಧ್ಯಮ ಕಂಪನಿಗಳು ದೇಶದ ನಿಯಮಗಳನ್ನು ಪಾಲಿಸಬೇಕು ಮತ್ತು ಸ್ಥಳೀಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದೆ.

ಇದನ್ನು ಓದಿ: ಜಯದೇವ ಹೃದ್ರೋಗ ಸಂಸ್ಥೆಗೆ ಡಾ.ದಿನೇಶ್‌ ನಿರ್ದೇಶಕರಾಗಿ ನೇಮಕ

ಈ ಹಿಂದೆ ಲಿಪುಲೇಖ್, ಕಲಾಪಾನಿ ಮತ್ತು ಲಿಂಪಿಯಾಧುರ ನೇಪಾಳಕ್ಕೆ ಸೇರಿವೆ ಎಂದು ನಾನು ಪ್ರತಿಪಾದಿಸಿದ್ದೆ. ಧರ್ಮಗ್ರಂಥಗಳು ಹೇಳುವಂತೆ ಭಗವಾನ್ ಶ್ರೀರಾಮ ಭಾರತದಲ್ಲಿ ಜನಿಸಿಲ್ಲ. ನೇಪಾಳದಲ್ಲಿ ಜನಿಸಿದನೆಂದು ನಾನು ಸಮರ್ಥಿಸಿಕೊಂಡಿದ್ದೆ. ಈ ನಿಲುವುಗಳಲ್ಲಿ ನಾನು ರಾಜಿ ಮಾಡಿಕೊಂಡಿದ್ದರೆ ನಾನು ಅನೇಕ ಸುಲಭ ಮಾರ್ಗಗಳನ್ನು ಆರಿಸಿಕೊಳ್ಳಬಹುದಿತ್ತು. ಲಿಂಪಿಯಾಧುರ ಸೇರಿದಂತೆ ನೇಪಾಳದ ನಕ್ಷೆಯನ್ನು ವಿಶ್ವಸಂಸ್ಥೆಗೆ ಕಳುಹಿಸದಿದ್ದರೆ ನನ್ನ ಜೀವನವು ತುಂಬಾ ವಿಭಿನ್ನವಾಗಿರುತ್ತಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಚೀನಾ ಪರವಾಗಿದ್ದ ಕೆ.ಪಿಶರ್ಮಾ ಓಲಿ ಬಹಿರಂಗವಾಗಿಯೇ ಭಾರತದ ವಿರುದ್ಧ ಹೇಳಿಕೆ ನೀಡುತ್ತಿದ್ದರು. ಅದರಲ್ಲೂ ರಾಮನ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ರಾಮ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹುಟ್ಟಿದ್ದಾನೆ ಎಂದು ಭಾರತ ಹೇಳುತ್ತಿರುವ ಕಾರಣ ಸೀತೆ ರಾಜಕುಮಾರ ರಾಮನನ್ನು ವಿವಾಹವಾಗಿದ್ದಾಳೆ ಎಂದು ನಾವು ನಂಬಿದ್ದೇವೆ. ಆದರೆ ನಿಜವಾದ ಅಯೋಧ್ಯೆ ನೇಪಾಳದ ಬಿರ್ಗುಂಜ್‍ನ ಪಶ್ಚಿಮ ಭಾಗದಲ್ಲಿರುನ ಥೋರಿ ನಗರದಲ್ಲಿದೆ ಎಂದು ಹೊಸ ಕಥೆ ಕಟ್ಟಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

4 mins ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

9 mins ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

21 mins ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

2 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

2 hours ago