ದೇಶ- ವಿದೇಶ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್‌ ಇನ್ನಿಲ್ಲ

ಪಾಕಿಸ್ತಾನದ ಮಾಜಿ ಅಧ್ಯಕ್ಷ, ನಿವೃತ್ತ ಸೇನಾಧಿಕಾರಿ ಪರ್ವೇಜ್​ ಮುಷರಫ್ ಇಂದು ದುಬೈನಲ್ಲಿ ನಿಧನ ಹೊಂದಿದ್ದಾರೆ.

ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್​ ಮುಷರಫ್ (79) ಅವರು ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು ದುಬೈನ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಭ್ರಷ್ಟಾಚಾರ ಆರೋಪ ಹೊತ್ತಿದ್ದ ಇವರು ಪಾಕಿಸ್ತಾನದಿಂದ ಪಲಾಯನಗೊಂಡು ದುಬೈನಲ್ಲಿ ನೆಲೆಸಿದ್ದರು.

. 78 ವರ್ಷದ ಮುಷರಫ್ ಅವರು ಅಮಿಲೋಡೋಸಿಸ್ (Amyloidosis) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದರೆನ್ನಲಾಗಿದ್ದು, 2016ರಿಂದ ದುಬೈನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರುಇತ್ತೀಚೆಗಷ್ಟೇ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿ ನಗರದಲ್ಲಿರುವ ಆರ್ಮ್ಡ್ ಫೋರ್ಸಸ್ ಇನ್ಸ್​ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆಸ್ಪತ್ರೆಗೆ ವರ್ಗವಾಗಿದ್ದರುಆದರೆಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ಪರ್ವೇಜ್ ಮುಷರಫ್ ಬದುಕುಳಿಯುವುದು ಬಹುತೇಕ ಕಷ್ಟ ಎಂದು ಸಾಕಷ್ಟು ಮೊದಲೇ ಗೊತ್ತಾಗಿತ್ತುಮುಷರಫ್ ಅವರ ಆರೋಗ್ಯ ಚೇತರಿಕೆ ಕಾಣುವುದು ಸಾಧ್ಯವಾಗುತ್ತಿಲ್ಲಅವರ ಅಂಗಾಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರ ಕುಟುಂಬ ಸದಸ್ಯರು ಜೂನ್ 10ರಂದು ಹೇಳಿಕೆ ನೀಡಿದ್ದರು.

ವೆಂಟಿಲೇಟರ್​ನಲ್ಲಿ ಅವರನ್ನು ಇಡಲಾಗಿಲ್ಲಕಳೆದ ವಾರಗಳಿಂದ ಈ ಕಾಯಿಲೆ ತೀವ್ರ ಸ್ವರೂಪ ಪಡೆದಿದ್ದರಿಂದ ಆಸ್ಪತ್ರೆಯಲ್ಲಿದ್ದಾರೆಚೇತರಿಕೆ ಕಾಣದ ಹಂತದಲ್ಲಿ ಅವರಿದ್ದಾರೆಅಂಗಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲಅವರ ನಿತ್ಯ ಜೀವನ ಸುಗಮವಾಗಿರುವಂತೆ ಪ್ರಾರ್ಥಿಸಿ” ಎಂದು ಕುಟುಂಬದವರು ದೇಶವಾಸಿಗಳಿಗೆ ಮನವಿ ಮಾಡಿದ್ದರು.ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥರಾಗಿದ್ದ ಪರ್ವೇಜ್ ಮುಷರಫ್ 2001ರಿಂದ 2008ರಿಂದ ತಮ್ಮ ದೇಶದ ಅಧ್ಯಕ್ಷರಾಗಿದ್ದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago