Ranil vikram singhe
ಕೊಲೊಂಬೊ : ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ತಾವು ಅಧ್ಯಕ್ಷರಾಗಿದ್ದಾಗ ಯುನೈಟೆಡ್ ಕಿಂಗ್ಡಮ್ಗೆ ನೀಡಿದ ವೈಯಕ್ತಿಕ ಭೇಟಿಗಾಗಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಕುರಿತು ಹೇಳಿಕೆ ದಾಖಲಿಸಲು ಆಗಮಿಸಿದ್ದರು. ಇದಾದ ನಂತರ ಅವರನ್ನು ಕೊಲಂಬೊದಲ್ಲಿ ಕ್ರಿಮಿನಲ್ ತನಿಖಾ ಇಲಾಖೆ (ಸಿಐಡಿ) ಇಂದು ಬಂಧಿಸಿದೆ.
2022ರಿಂದ 2024ರವರೆಗೆ ಶ್ರೀಲಂಕಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರನಿಲ್ ವಿಕ್ರಮಸಿಂಘೆ, ಸೆಪ್ಟೆಂಬರ್ 2023ರಲ್ಲಿ ವೊಲ್ವರ್ಹ್ಯಾಂಪ್ಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿ ಪ್ರೊಫೆಸರ್ ಮೈತ್ರೀ ವಿಕ್ರಮಸಿಂಘೆ ಅವರ ಪಿಎಚ್ಡಿ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸರ್ಕಾರಿ ಹಣವನ್ನು ಬಳಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ. ಪತ್ನಿಯ ಕಾರ್ಯಕ್ರಮಕ್ಕೆ ತೆರಳಲು ಬಳಸಲಾಗಿದ್ದ ಸರ್ಕಾರಿ ಹಣವನ್ನು ವಾಪಾಸ್ ನೀಡಿದ್ದಾರೆಯೇ ಎಂಬ ಬಗ್ಗೆ ನಡೆಯುತ್ತಿರುವ ತನಿಖೆಯ ಬಳಿಕ ಅನಿರೀಕ್ಷತವಾಗಿ ಅವರನ್ನು ಬಂಧಿಸಲಾಗಿದೆ.
76 ವರ್ಷದ ವಿಕ್ರಮಸಿಂಘೆ ಅವರನ್ನು ಅಪರಾಧ ತನಿಖಾ ಇಲಾಖೆ(ಸಿಐಡಿ) ಪ್ರಧಾನ ಕಚೇರಿಯಲ್ಲಿ ಬಂಧಿಸಲಾಗಿದ್ದು, ಸರ್ಕಾರಿ ಹಣ ದುರುಪಯೋಗದ ತನಿಖೆಗೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಲು ಅವರನ್ನು ಇಲ್ಲಿಗೆ ಕರೆಸಲಾಗಿತ್ತು ಎಂದು ಪೊಲೀಸರು ದೃಢಪಡಿಸಿದ್ದಾರೆ. ಕೊಲಂಬೊ ಫೋರ್ಟ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಾದ ಪೊಲೀಸ್ ದಾಖಲೆಗಳ ಪ್ರಕಾರ, ಕ್ಯೂಬಾ ಮತ್ತು ಯುನೈಟೆಡ್ ಸ್ಟೇಟ್ಸ್ಗೆ ಅಧಿಕೃತ ಭೇಟಿಗಾಗಿ ರನಿಲ್ ವಿಕ್ರಮಸಿಂಘೆ ತೆರಳಿದ್ದರು. ಅಲ್ಲಿಂದ ವಾಪಾಸ್ ಬರುವಾಗ ಹೆಂಡತಿಯ ಕಾರ್ಯಕ್ರಮಕ್ಕಾಗಿ ಸರ್ಕಾರಿ ಹಣದಲ್ಲಿ ಲಂಡನ್ಗೆ ಪ್ರಯಾಣ ಬೆಳೆಸಿದ್ದರು. ಆದರೆ, ಅವರ ಅಧಿಕೃತ ಭೇಟಿಯ ಪಟ್ಟಿಯಲ್ಲಿ ಇಂಗ್ಲೆಂಡ್ ಪ್ರವಾಸ ಇರಲಿಲ್ಲ ಎಂದು ತಿಳಿದುಬಂದಿದೆ. ಇದಕ್ಕಾಗಿ ಸುಮಾರು 16.9 ಮಿಲಿಯನ್ ರೂ.ಗಳಷ್ಟು ಸಾರ್ವಜನಿಕ ನಿಧಿಯನ್ನು ಬಳಸಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…