ದೇಶ- ವಿದೇಶ

ಸರ್ಕಾರದ ಹಣ ದುರ್ಬಳಕೆ : ಶ್ರೀಲಂಕಾದ ಮಾಜಿ ಅಧ್ಯಕ್ಷ ಬಂಧನ

ಕೊಲೊಂಬೊ : ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ತಾವು ಅಧ್ಯಕ್ಷರಾಗಿದ್ದಾಗ ಯುನೈಟೆಡ್ ಕಿಂಗ್‌ಡಮ್‌ಗೆ ನೀಡಿದ ವೈಯಕ್ತಿಕ ಭೇಟಿಗಾಗಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಕುರಿತು ಹೇಳಿಕೆ ದಾಖಲಿಸಲು ಆಗಮಿಸಿದ್ದರು. ಇದಾದ ನಂತರ ಅವರನ್ನು ಕೊಲಂಬೊದಲ್ಲಿ ಕ್ರಿಮಿನಲ್ ತನಿಖಾ ಇಲಾಖೆ (ಸಿಐಡಿ) ಇಂದು ಬಂಧಿಸಿದೆ.

2022ರಿಂದ 2024ರವರೆಗೆ ಶ್ರೀಲಂಕಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರನಿಲ್ ವಿಕ್ರಮಸಿಂಘೆ, ಸೆಪ್ಟೆಂಬರ್ 2023ರಲ್ಲಿ ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿ ಪ್ರೊಫೆಸರ್ ಮೈತ್ರೀ ವಿಕ್ರಮಸಿಂಘೆ ಅವರ ಪಿಎಚ್‌ಡಿ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸರ್ಕಾರಿ ಹಣವನ್ನು ಬಳಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ. ಪತ್ನಿಯ ಕಾರ್ಯಕ್ರಮಕ್ಕೆ ತೆರಳಲು ಬಳಸಲಾಗಿದ್ದ ಸರ್ಕಾರಿ ಹಣವನ್ನು ವಾಪಾಸ್ ನೀಡಿದ್ದಾರೆಯೇ ಎಂಬ ಬಗ್ಗೆ ನಡೆಯುತ್ತಿರುವ ತನಿಖೆಯ ಬಳಿಕ ಅನಿರೀಕ್ಷತವಾಗಿ ಅವರನ್ನು ಬಂಧಿಸಲಾಗಿದೆ.

76 ವರ್ಷದ ವಿಕ್ರಮಸಿಂಘೆ ಅವರನ್ನು ಅಪರಾಧ ತನಿಖಾ ಇಲಾಖೆ(ಸಿಐಡಿ) ಪ್ರಧಾನ ಕಚೇರಿಯಲ್ಲಿ ಬಂಧಿಸಲಾಗಿದ್ದು, ಸರ್ಕಾರಿ ಹಣ ದುರುಪಯೋಗದ ತನಿಖೆಗೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಲು ಅವರನ್ನು ಇಲ್ಲಿಗೆ ಕರೆಸಲಾಗಿತ್ತು ಎಂದು ಪೊಲೀಸರು ದೃಢಪಡಿಸಿದ್ದಾರೆ. ಕೊಲಂಬೊ ಫೋರ್ಟ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಾದ ಪೊಲೀಸ್ ದಾಖಲೆಗಳ ಪ್ರಕಾರ, ಕ್ಯೂಬಾ ಮತ್ತು ಯುನೈಟೆಡ್ ಸ್ಟೇಟ್ಸ್‌ಗೆ ಅಧಿಕೃತ ಭೇಟಿಗಾಗಿ ರನಿಲ್ ವಿಕ್ರಮಸಿಂಘೆ ತೆರಳಿದ್ದರು. ಅಲ್ಲಿಂದ ವಾಪಾಸ್ ಬರುವಾಗ ಹೆಂಡತಿಯ ಕಾರ್ಯಕ್ರಮಕ್ಕಾಗಿ ಸರ್ಕಾರಿ ಹಣದಲ್ಲಿ ಲಂಡನ್​ಗೆ ಪ್ರಯಾಣ ಬೆಳೆಸಿದ್ದರು. ಆದರೆ, ಅವರ ಅಧಿಕೃತ ಭೇಟಿಯ ಪಟ್ಟಿಯಲ್ಲಿ ಇಂಗ್ಲೆಂಡ್ ಪ್ರವಾಸ ಇರಲಿಲ್ಲ ಎಂದು ತಿಳಿದುಬಂದಿದೆ. ಇದಕ್ಕಾಗಿ ಸುಮಾರು 16.9 ಮಿಲಿಯನ್ ರೂ.ಗಳಷ್ಟು ಸಾರ್ವಜನಿಕ ನಿಧಿಯನ್ನು ಬಳಸಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

7 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

10 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

10 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

12 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

13 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

14 hours ago