ನ್ಯೂಯಾರ್ಕ್: ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಗುಂಡೇಟಾಗಿದೆ. ಬಟ್ಲರ್ನ ಪೆನ್ಸಿಲ್ವೇನಿಯಾದಲ್ಲಿ ಶನಿವಾರ(ಜು.13) ರ್ಯಾಲಿ ನಡೆಸುತ್ತಿದ್ದ ವೇಳೆ ಗುಂಡಿನ ದಾಳಿಯಾಗಿದ್ದು, ಟ್ರಂಪ್ನನ್ನು ಹತ್ಯೆ ಮಾಡಲು ಯತ್ನಿಸಲಾಗುತ್ತಿದೆ ಎಂದು ವರದಿಯಾಗುತ್ತಿದೆ.
ಬಂದೂಕುದಾರಿ ಟ್ರಂಪ್ನತ್ತ ಶೂಟ್ ಮಾಡಿದ್ದರಿಂದ ಕಿವಿಗೆ ತಗುಲಿ ಕಿವಿ ಹಾಗೂ ಮುಖದಲ್ಲಿ ರಕ್ತ ಸುರಿದಿದ್ದು, ಸ್ವಲ್ಪದರಲ್ಲೇ ಟ್ರಂಪ್ ಪಾರಾಗಿದ್ದು, ತಕ್ಷಣ ಭದ್ರತಾ ಸಿಬ್ಬಂದಿಗಳು ರಕ್ಷಣೆಗೆ ಧಾವಿಸಿದ್ದಾರೆ.
ಟ್ರಂಪ್ ಅವರು ಬೆಂಬಲಿಗರ ದೊಡ್ಡ ಗುಂಪಿನ ನಡುವೆ ಭಾಷಣ ಮಾಡುತ್ತಿದ್ದಾಗ ಗುಂಡಿನ ದಾಳಿ ನಡೆದಿದ್ದು, ಘಟನೆ ನಡೆದ ಕೂಡಲೇ ಟ್ರಂಪ್ ಕೈ ಎತ್ತಿ ಮುಷ್ಠಿ ಹಿಡಿದು ಸಾರ್ವಜನಿಕರತ್ತ ತಮ್ಮ ವಿರೋಧ ವ್ಯಕ್ತಪಡಿಸಿದರು. ಈ ಘಟನೆ ಅಮೆರಿಕಾ ರಾಜಕೀಯ ನಾಯಕರನ್ನು ದಿಗ್ಭ್ರಾಂತಗೊಳಿಸಿದೆ.
ಗುಂಡಿನ ದಾಳಿಯಾದ ತಕ್ಷಣ ಭದ್ರತಾ ಸಿಬ್ಬಂದಿ ಸುತ್ತುವರೆದು ರಕ್ಷಿಸಿ ವೇದಿಕೆಯಿಂದ ಹೊರಕರೆತಂದರು.
ಗುಂಡಿನ ದಾಳಿಕೋರನನ್ನು ಟ್ರಂಪ್ ಸಿಬ್ಬಂದಿ ಹತ್ಯೆ ಮಾಡಿದ್ದು, ಶೂಟರ್ ಜೊತೆಗೆ ಮತ್ತೊಬ್ಬ ಸಾವಿಗೀಡಾಗಿದಾರೆ ಎಂದು ವರದಿಯಾಗಿದೆ.
ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.19ರವರೆಗೆ ಅಧಿವೇಶನ…
ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…
ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…
ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…
ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…