ದೇಶ- ವಿದೇಶ

ಹಾಲಿನ ದರ ಏರಿಕೆಯ ಹಣ ರೈತರಿಗೆ: ಡಿಸಿಎಂ ಡಿಕೆ ಶಿವಕುಮಾರ್‌

ನವದೆಹಲಿ: ಹಾಲಿನ ಮೇಲೆ ದರ ಏರಿಕೆ ಮಾಡಿರುವ 4 ರೂ.ಗಳು ಸರ್ಕಾರಕ್ಕೆ ಬರುವುದಿಲ್ಲ. ಬದಲಾಗಿ ಅದು ರೈತರಿಗೆ ಹೋಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಹಾಲಿನ ದರ ಏರಿಕೆ ಬೆನ್ನಲ್ಲೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿಕೆ ಶಿವಕುಮಾರ್‌ ಅವರು, ಮೊದಲು ಜಿಎಸ್‌ಟಿ ಮೇಲಿನ ಬೆಲೆ, ಪೆಟ್ರೋಲ್‌ ಮೇಲಿನ ಬೆಲೆ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಹೇಳಿ ನಂತರ ಇದರ ಬಗ್ಗೆ ಮಾತನಾಡಲಿ ಎಂದು ಟಾಂಗ್‌ ನೀಡಿದರು.

ಬೆಲೆ ಏರಿಕೆ ಹಣ ಸರ್ಕಾರಕ್ಕೆ ಬರಲ್ಲ. ಬದಲಾಗಿ ರೈತರಿಗೆ ಹೋಗುತ್ತದೆ. ಹಾಲಿನ ಸಹಕಾರ ವ್ಯವಸ್ಥೆ ಬಗ್ಗೆ ಅವರ ಅಣ್ಣನ ಬಳಿ ಕೇಳಲಿ ಎಂದು ಕುಟುಕಿದರು.

ಇನ್ನು ಕೆಎನ್‌ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರ ಹತ್ಯೆ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಗೊತ್ತಿಲ್ಲ. ಗೃಹ ಸಚಿವರು ಈ ಕುರಿತು ತನಿಖೆ ಮಾಡಿಸುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

1 hour ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

1 hour ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago