ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿ (ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ) ಎಕ್ಸ್ ಖಾತೆಯ ಮೂಲಕ ಖಚಿತಪಡಿಸಿದೆ.
ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಬರ್ಕ್ಲಿ (UC Berkeley)ಯಲ್ಲಿ ಎಂ.ಎಸ್ಸಿ (ಕೆಮಿಕಲ್ ಅಂಡ್ ಬಯೋಮಾಲಿಕ್ಯುಲರ್ ಎಂಜಿನಿಯರಿಂಗ್ / ಪ್ರೊಡಕ್ಟ್ ಡೆವಲಪ್ಮೆಂಟ್ ಪ್ರೋಗ್ರಾಂ) ವ್ಯಾಸಂಗ ಮಾಡುತ್ತಿದ್ದ ಸಾಕೇತ್, ಫೆಬ್ರವರಿ 9ರಿಂದ ಕಾಣೆಯಾಗಿದ್ದರು.
ಇದರ ಬೆನ್ನಲ್ಲೇ, ಅವರ ಪಾಸ್ಪೋರ್ಟ್ ಮತ್ತು ಲ್ಯಾಪ್ಟಾಪ್ ಇದ್ದ ಬ್ಯಾಗ್ ಪಾರ್ಕ್ ಹಿಲ್ ನೈಬರ್ಹುಡ್ ನಿವಾಸದ ಬಳಿ ಪತ್ತೆಯಾಗಿತ್ತು ಎಂದು ಬರ್ಕ್ಲಿ ಸ್ಕ್ಯಾನರ್ ನ್ಯೂಸ್ ಪೋರ್ಟಲ್ ವರದಿ ಮಾಡಿತ್ತು.
ಸ್ಥಳೀಯ ಪೊಲೀಸರು ಮತ್ತು ಡೈವ್ ತಂಡದಿಂದ ಫೆಬ್ರವರಿ 14ರಂದು ಲೇಕ್ ಅಂಜಾ (Lake Anza) ಬಳಿ ಮೃತದೇಹವನ್ನು ವಶಪಡಿಸಿಕೊಳ್ಳಲಾಯಿತು. ಇದನ್ನು ಭಾರತೀಯ ಕಾನ್ಸುಲೇಟ್ ದೃಢಪಡಿಸಿದೆ.
ಕಾನ್ಸುಲೇಟ್ ಹೇಳಿಕೆಯ ಪ್ರಕಾರ ಸ್ಥಳೀಯ ಆಡಳಿತದೊಂದಿಗೆ ಸಂವಹನ ಸಾಧಿಸಿ, ಸಾಕೇತ್ ಅವರ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸಲು ಬೇಕಿರುವ ಎಲ್ಲ ನೆರವು ನೀಡಲಾಗುತ್ತಿದೆ. ನೊಂದಿರುವ ಕುಟುಂಬದ ಜೊತೆಗೆ ರಾಯಭಾರ ಕಚೇರಿ ನಿಲ್ಲುತ್ತದೆ ಎಂದು ತಿಳಿಸಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…