ದೇಶ- ವಿದೇಶ

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿ (ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ) ಎಕ್ಸ್ ಖಾತೆಯ ಮೂಲಕ ಖಚಿತಪಡಿಸಿದೆ.

ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಬರ್ಕ್ಲಿ (UC Berkeley)ಯಲ್ಲಿ ಎಂ.ಎಸ್ಸಿ (ಕೆಮಿಕಲ್ ಅಂಡ್ ಬಯೋಮಾಲಿಕ್ಯುಲರ್ ಎಂಜಿನಿಯರಿಂಗ್ / ಪ್ರೊಡಕ್ಟ್ ಡೆವಲಪ್‌ಮೆಂಟ್ ಪ್ರೋಗ್ರಾಂ) ವ್ಯಾಸಂಗ ಮಾಡುತ್ತಿದ್ದ ಸಾಕೇತ್, ಫೆಬ್ರವರಿ 9ರಿಂದ ಕಾಣೆಯಾಗಿದ್ದರು.

ಇದರ ಬೆನ್ನಲ್ಲೇ, ಅವರ ಪಾಸ್‌ಪೋರ್ಟ್ ಮತ್ತು ಲ್ಯಾಪ್‌ಟಾಪ್ ಇದ್ದ ಬ್ಯಾಗ್ ಪಾರ್ಕ್ ಹಿಲ್ ನೈಬರ್‌ಹುಡ್ ನಿವಾಸದ ಬಳಿ ಪತ್ತೆಯಾಗಿತ್ತು ಎಂದು ಬರ್ಕ್ಲಿ ಸ್ಕ್ಯಾನರ್ ನ್ಯೂಸ್ ಪೋರ್ಟಲ್ ವರದಿ ಮಾಡಿತ್ತು.

ಸ್ಥಳೀಯ ಪೊಲೀಸರು ಮತ್ತು ಡೈವ್ ತಂಡದಿಂದ ಫೆಬ್ರವರಿ 14ರಂದು ಲೇಕ್ ಅಂಜಾ (Lake Anza) ಬಳಿ ಮೃತದೇಹವನ್ನು ವಶಪಡಿಸಿಕೊಳ್ಳಲಾಯಿತು. ಇದನ್ನು ಭಾರತೀಯ ಕಾನ್ಸುಲೇಟ್ ದೃಢಪಡಿಸಿದೆ.

ಕಾನ್ಸುಲೇಟ್ ಹೇಳಿಕೆಯ ಪ್ರಕಾರ ಸ್ಥಳೀಯ ಆಡಳಿತದೊಂದಿಗೆ ಸಂವಹನ ಸಾಧಿಸಿ, ಸಾಕೇತ್ ಅವರ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸಲು ಬೇಕಿರುವ ಎಲ್ಲ ನೆರವು ನೀಡಲಾಗುತ್ತಿದೆ. ನೊಂದಿರುವ ಕುಟುಂಬದ ಜೊತೆಗೆ ರಾಯಭಾರ ಕಚೇರಿ ನಿಲ್ಲುತ್ತದೆ ಎಂದು ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago