ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿ (ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ) ಎಕ್ಸ್ ಖಾತೆಯ ಮೂಲಕ ಖಚಿತಪಡಿಸಿದೆ.
ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಬರ್ಕ್ಲಿ (UC Berkeley)ಯಲ್ಲಿ ಎಂ.ಎಸ್ಸಿ (ಕೆಮಿಕಲ್ ಅಂಡ್ ಬಯೋಮಾಲಿಕ್ಯುಲರ್ ಎಂಜಿನಿಯರಿಂಗ್ / ಪ್ರೊಡಕ್ಟ್ ಡೆವಲಪ್ಮೆಂಟ್ ಪ್ರೋಗ್ರಾಂ) ವ್ಯಾಸಂಗ ಮಾಡುತ್ತಿದ್ದ ಸಾಕೇತ್, ಫೆಬ್ರವರಿ 9ರಿಂದ ಕಾಣೆಯಾಗಿದ್ದರು.
ಇದರ ಬೆನ್ನಲ್ಲೇ, ಅವರ ಪಾಸ್ಪೋರ್ಟ್ ಮತ್ತು ಲ್ಯಾಪ್ಟಾಪ್ ಇದ್ದ ಬ್ಯಾಗ್ ಪಾರ್ಕ್ ಹಿಲ್ ನೈಬರ್ಹುಡ್ ನಿವಾಸದ ಬಳಿ ಪತ್ತೆಯಾಗಿತ್ತು ಎಂದು ಬರ್ಕ್ಲಿ ಸ್ಕ್ಯಾನರ್ ನ್ಯೂಸ್ ಪೋರ್ಟಲ್ ವರದಿ ಮಾಡಿತ್ತು.
ಸ್ಥಳೀಯ ಪೊಲೀಸರು ಮತ್ತು ಡೈವ್ ತಂಡದಿಂದ ಫೆಬ್ರವರಿ 14ರಂದು ಲೇಕ್ ಅಂಜಾ (Lake Anza) ಬಳಿ ಮೃತದೇಹವನ್ನು ವಶಪಡಿಸಿಕೊಳ್ಳಲಾಯಿತು. ಇದನ್ನು ಭಾರತೀಯ ಕಾನ್ಸುಲೇಟ್ ದೃಢಪಡಿಸಿದೆ.
ಕಾನ್ಸುಲೇಟ್ ಹೇಳಿಕೆಯ ಪ್ರಕಾರ ಸ್ಥಳೀಯ ಆಡಳಿತದೊಂದಿಗೆ ಸಂವಹನ ಸಾಧಿಸಿ, ಸಾಕೇತ್ ಅವರ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸಲು ಬೇಕಿರುವ ಎಲ್ಲ ನೆರವು ನೀಡಲಾಗುತ್ತಿದೆ. ನೊಂದಿರುವ ಕುಟುಂಬದ ಜೊತೆಗೆ ರಾಯಭಾರ ಕಚೇರಿ ನಿಲ್ಲುತ್ತದೆ ಎಂದು ತಿಳಿಸಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…