ಉತ್ತರ ಪ್ರದೇಶ: ಇಲ್ಲಿನ ಗೊಂಡಾ ಬಳಿ ಗುರುವಾರ (ಜು.18) ಚಂಡೀಗಢ-ದಿಬ್ರುಗಡ ಎಕ್ಸ್ಪ್ರಸ್ ರೈಲು ಅಳಿತಪ್ಪಿ ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಹಾಗೂ ಗಾಯಳುಗಳ ಸಂಖ್ಯೆ 20ಕ್ಕೂ ಅಧಿಕವಾಗಿದೆ ಎಂದು ವರದಿಯಾಗಿದೆ.
ಚಂಡೀಗಢದಿಂದ ಬರುತ್ತಿದ್ದ ಈ ರೈಲು ಉತ್ತರ ಪ್ರದೇಶದ ಜಿಲಾಹಿ 15904 ರೈಲು ನಿಲ್ದಾಣ ಹಾಗೂ ಗೋಸಾಯಿ ದಿಹ್ವಾ ನಡುವೆ ಹಳಿ ತಪ್ಪಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಮೊದಲು ಇಬ್ಬರು ಸಾವಿಗೀಡಾಗಿದ್ದರು. ಕೆಲ ಸಮಯದ ಬಳಿಕ ಮತ್ತಿಬ್ಬರು ಮೃತರಾಗಿದ್ದು, ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಜತೆಗೆ 25ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದೆ.
ಇನ್ನೂ ರೈಲು ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈಶಾನ್ಯ ರೈಲ್ವೆಯ ಲಕ್ನೋ ವಿಭಾಗದಲ್ಲಿ 15904 ದಿಬ್ರುಗಢ ಎಕ್ಸ್ಪ್ರೆಸ್ ಹಳಿತಪ್ಪಿದ ಬಗ್ಗೆ ಸಹಾಯವಾಣಿಯನ್ನು ತೆರೆಯಲಾಗಿದೆ.
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…