ಉತ್ತರ ಪ್ರದೇಶ: ಇಲ್ಲಿನ ಗೊಂಡಾ ಬಳಿ ಗುರುವಾರ (ಜು.18) ಚಂಡೀಗಢ-ದಿಬ್ರುಗಡ ಎಕ್ಸ್ಪ್ರಸ್ ರೈಲು ಅಳಿತಪ್ಪಿ ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಹಾಗೂ ಗಾಯಳುಗಳ ಸಂಖ್ಯೆ 20ಕ್ಕೂ ಅಧಿಕವಾಗಿದೆ ಎಂದು ವರದಿಯಾಗಿದೆ.
ಚಂಡೀಗಢದಿಂದ ಬರುತ್ತಿದ್ದ ಈ ರೈಲು ಉತ್ತರ ಪ್ರದೇಶದ ಜಿಲಾಹಿ 15904 ರೈಲು ನಿಲ್ದಾಣ ಹಾಗೂ ಗೋಸಾಯಿ ದಿಹ್ವಾ ನಡುವೆ ಹಳಿ ತಪ್ಪಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಮೊದಲು ಇಬ್ಬರು ಸಾವಿಗೀಡಾಗಿದ್ದರು. ಕೆಲ ಸಮಯದ ಬಳಿಕ ಮತ್ತಿಬ್ಬರು ಮೃತರಾಗಿದ್ದು, ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಜತೆಗೆ 25ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದೆ.
ಇನ್ನೂ ರೈಲು ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈಶಾನ್ಯ ರೈಲ್ವೆಯ ಲಕ್ನೋ ವಿಭಾಗದಲ್ಲಿ 15904 ದಿಬ್ರುಗಢ ಎಕ್ಸ್ಪ್ರೆಸ್ ಹಳಿತಪ್ಪಿದ ಬಗ್ಗೆ ಸಹಾಯವಾಣಿಯನ್ನು ತೆರೆಯಲಾಗಿದೆ.
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…