ಬೆಳಗಾವಿ: ಪ್ರಯಾಗ್ರಾಜ್ನ ಮಹಾಕುಂಭ ಮೇಳದಲ್ಲಿ ಸಾರ್ವಜನಿಕರ ನೂಕು ನುಗ್ಗಲಿನಿಂದ ಕಾಲ್ತುಳಿತಕ್ಕೆ ಸಿಲುಕಿದ ಬೆಳಗಾವಿಯ ನಾಲ್ವರು ಕನ್ನಡಿಗರು ಸಾವನ್ನಪ್ಪಿದ್ದಾರೆ.
ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಮತ್ತು ಪುತ್ರಿ ಮೇಘಾ ಹತ್ತರವಾಠ (18), ಶೆಟ್ಟಿಗಲ್ಲಿಯ ಅರುಣ ಕೋರ್ಪಡೆ ಹಾಗೂ ಶಿವಾಜಿನಗರದ ನಿವಾಸಿ ಮಹಾದೇವಿ ಮೃತರಾಗಿದ್ದಾರೆ.
ಇಂದು (ಜ.29) ಬೆಳಿಗ್ಗೆ ಕಾಲ್ತುಳಿತಕ್ಕೆ ಸಿಕ್ಕಿ ಗಾಯಗೊಂಡಿದ್ದ ನಾಲ್ವರನ್ನು ಪ್ರಯಾಗ್ರಾಜ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಅಲ್ಲಿನ ವೈದ್ಯಕೀಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಬೆಳಗಾವಿಯ ನಾಲ್ವರು ಸಾವನ್ನಪ್ಪಿದ ಮಾಹಿತಿ ಖಚಿತವಾಗಿದ್ದು, ಅವರ ಶವಗಳನ್ನು ತವರೂರಿಗೆ ತರಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…