ಬೇಗುಸರಾಯ್ : ಹಳಿ ದಾಟುತ್ತಿದ್ದವರ ಮೇಲೆ ರೈಲು ಹರಿದ ಪರಿಣಾಮ ತಾಯಿ-ಮಗಳು ಸೇರಿದಂತೆ ನಾಲ್ವರು ಬಲಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಹಳಿ ದಾಟಲು ಯತ್ನಿಸುತ್ತಿದ್ದ ಮಹಿಳೆ ಮತ್ತು ಅವರ ಮಗಳು ಸೇರಿದಂತೆ ನಾಲ್ವರು ರೈಲು ಹರಿದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: ದೀಪಾವಳಿ ವಿಶೇಷ ರೈಲಯ ಸಂಚಾರ : 10 ಕೋಟಿ ರೂ. ಆದಾಯ
ಸಾಹೇಬ್ಪುರ ಕಮಲ್ ಪೊಲೀಸ್ ಠಾಣೆಯ ಎಸ್ಎಚ್ಒ ಸಿಂಟು ಕುಮಾರ್ ಅವರು ತಡರಾತ್ರಿ ಬರೌನಿ-ಕತಿಹಾರ್ ವಿಭಾಗದಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.
ಮೃತರನ್ನು ರೀತಾ ದೇವಿ (೪೦), ಅವರ ಮಗಳು ರೋಶ್ನಿ ಕುಮಾರಿ (೧೪), ಏಳು ವರ್ಷದ ಅರೋಹಿ ಕುಮಾರಿ ಮತ್ತು ಅವರ ಚಿಕ್ಕಪ್ಪ ಧರ್ಮ ದೇವ್ ಮಹ್ತೊ (೩೫) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಹಸ್ತಂತರಿಸಲಾಯಿತು.
ರಾಹುವಾ ಗ್ರಾಮದ ನಾಲ್ವರು ನಿವಾಸಿಗಳು ಹತ್ತಿರದ ಪ್ರದೇಶದಲ್ಲಿ ನಡೆದ ಜಾತ್ರೆಯಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದಾಗ, ಅಮ್ರಪಾಲಿ ಎಕ್ಸ್ಪ್ರೆಸ್ ಹಾದುಹೋಗುವಾಗ ರೈಲ್ವೆ ಹಳಿಗಳನ್ನು ದಾಟಲು ಪ್ರಯತ್ನಿಸಿದರು ಎಂದು ಎಸ್ಎಚ್ಒ ಹೇಳಿದರು.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…