ದೇಶ- ವಿದೇಶ

ಕೇರಳದಲ್ಲಿ ಗುಡ್ಡ ಕುಸಿತ: ನಾಲ್ವರ ದುರ್ಮರಣ

ಕೇರಳ: 2019ರಲ್ಲಿ ಸಮೀಪಿಸಿದ್ದ ಗುಡ್ಡ ಕುಸಿತ ಮತ್ತೊಮ್ಮೆ ವಯನಾಡಿನಲ್ಲಿ ಸಂಭವಿಸಿದೆ. ಕೇರಳ ರಾಜ್ಯದ ವಯನಾಡ್‌ ಜಿಲ್ಲೆಯ ಮೇಪ್ಪಾಡಿ ಬಳಿಯ ಚುರ್ಲಾಮಲಾ ಬಳಿ ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿದೆ.

ಈ ಗುಡ್ಡ ಕುಸಿತದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಮರಣ ಹೊಂದಿದ್ದಾರೆ.

ಮುಂಡಕ್ಕಾಯ್‌, ಚುರ್ಲಮಲಾ, ಅತ್ತಮಲಾ ಕಡೆಗಳಲ್ಲಿ ವಿಪರೀತ ಭೂಕುಸಿತ ಉಂಟಾದ ಪರಿಣಾಮ ಎಲ್ಲಾ ಕಡೆ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಭೂಕುಸಿತದಲ್ಲಿ ಸಿಲುಕಿರುವ ಜನರನ್ನು ವಾಯ ಮಾರ್ಗದ ಮೂಲಕ ರಕ್ಷಿಸುವ ಕೆಲಸ ಮಾಡಲಾಗುವ ಬಗ್ಗೆ ಜಿಲ್ಲಾ ಹಂತದ ಅಧಿಕಾರಿಗಳು ಯೋಜನೆ ರೂಪಿಸುತ್ತಿದ್ದಾರೆ ಎಂದು ಶಾಸಕ ಟಿ. ಸಿದ್ಧಿಕ್‌ ವೀಡಿಯೋ ಕಾನ್ಫರೆನ್ಸ್‌ ಮೂಲಕ ಮಾಹಿತಿ ನೀಡಿದ್ದಾರೆ.

ಭೂಕುಸಿತಕ್ಕೆ ಸಿಲುಕಿರುವವರ ರಕ್ಷಣೆಗಾಗಿ ವಾಯುಪಡೆಯ ಎರಡು ಎಲಿಕಾಪ್ಟರ್‌ಗಳು ಕಾರ್ಯಕೈಗೊಳ್ಳಲಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

2019ರಲ್ಲಿ ಇದೇ ರೀತಿ ವಯನಾಡಿನ ಮೆಪ್ಪಾಡಿ ಬಳಿ ಗುಡ್ಡ ಕುಸಿದಿತ್ತು. ಇದಾದ ಬಳಿಕ ಈಗ ಮತ್ತೊಮ್ಮೆ ಗುಡ್ಡ ಕುಸಿದಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

21 mins ago

ಓದುಗರ ಪತ್ರ: ಮರದ ಕೊಂಬೆಯನ್ನು ತೆರವುಗೊಳಿಸಿ

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…

23 mins ago

ಓದುಗರ ಪತ್ರ: ತಮಿಳುನಾಡಿನಲ್ಲಿ ವಿಜಯ್ ವಿಜಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…

23 mins ago

ಓದುಗರ ಪತ್ರ: ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಪರ್ವ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…

24 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

3 hours ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

3 hours ago