ಕೇರಳ: 2019ರಲ್ಲಿ ಸಮೀಪಿಸಿದ್ದ ಗುಡ್ಡ ಕುಸಿತ ಮತ್ತೊಮ್ಮೆ ವಯನಾಡಿನಲ್ಲಿ ಸಂಭವಿಸಿದೆ. ಕೇರಳ ರಾಜ್ಯದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಬಳಿಯ ಚುರ್ಲಾಮಲಾ ಬಳಿ ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿದೆ.
ಈ ಗುಡ್ಡ ಕುಸಿತದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಮರಣ ಹೊಂದಿದ್ದಾರೆ.
ಮುಂಡಕ್ಕಾಯ್, ಚುರ್ಲಮಲಾ, ಅತ್ತಮಲಾ ಕಡೆಗಳಲ್ಲಿ ವಿಪರೀತ ಭೂಕುಸಿತ ಉಂಟಾದ ಪರಿಣಾಮ ಎಲ್ಲಾ ಕಡೆ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಭೂಕುಸಿತದಲ್ಲಿ ಸಿಲುಕಿರುವ ಜನರನ್ನು ವಾಯ ಮಾರ್ಗದ ಮೂಲಕ ರಕ್ಷಿಸುವ ಕೆಲಸ ಮಾಡಲಾಗುವ ಬಗ್ಗೆ ಜಿಲ್ಲಾ ಹಂತದ ಅಧಿಕಾರಿಗಳು ಯೋಜನೆ ರೂಪಿಸುತ್ತಿದ್ದಾರೆ ಎಂದು ಶಾಸಕ ಟಿ. ಸಿದ್ಧಿಕ್ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಿದ್ದಾರೆ.
ಭೂಕುಸಿತಕ್ಕೆ ಸಿಲುಕಿರುವವರ ರಕ್ಷಣೆಗಾಗಿ ವಾಯುಪಡೆಯ ಎರಡು ಎಲಿಕಾಪ್ಟರ್ಗಳು ಕಾರ್ಯಕೈಗೊಳ್ಳಲಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
2019ರಲ್ಲಿ ಇದೇ ರೀತಿ ವಯನಾಡಿನ ಮೆಪ್ಪಾಡಿ ಬಳಿ ಗುಡ್ಡ ಕುಸಿದಿತ್ತು. ಇದಾದ ಬಳಿಕ ಈಗ ಮತ್ತೊಮ್ಮೆ ಗುಡ್ಡ ಕುಸಿದಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…