ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತಾ ಪಡೆಗಳು ನೆಲಬಾಂಬ್ ನಿಷ್ಕ್ರಿಯಗೊಳಿಸುವಲ್ಲಿ ತೊಡಗಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಘಟನೆ ಭದ್ರತಾ ಪಡೆಗಳನ್ನು ಮಾತ್ರವಲ್ಲದೆ ಇಡೀ ರಾಜ್ಯವನ್ನು ತೀವ್ರ ದುಃಖಕ್ಕೆ ದೂಡಿದೆ.
ಕಂಕೇರ್ ಜಿಲ್ಲೆಯ ಛೋಟೆಬೇಥಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ) ತಂಡವು ಕಂಕೇರ್-ನಾರಾಯಣಪುರ ಗಡಿಯಲ್ಲಿ ಶೋಧ ಕಾರ್ಯಾಚರಣೆ ಮತ್ತು ನೆಲಬಾಂಬ್ ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆಯಲ್ಲಿತ್ತು. ಇದ್ದಕ್ಕಿದ್ದಂತೆ, ನೆಲದಲ್ಲಿ ಹೂತುಹೋಗಿದ್ದ ಐಇಡಿ ಸ್ಛೋಟಗೊಂಡಿತ್ತು.
ಸ್ಛೋಟದ ನಂತರ ಗಾಯಾಳು ಯೋಧರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆಯ ಸಮಯದಲ್ಲಿ ಮೊದಲ ಮೂವರು ಸೈನಿಕರು ಸಾವನ್ನಪ್ಪಿದರು. ಗಂಭೀರವಾಗಿ ಗಾಯಗೊಂಡಿದ್ದ ಕಾನ್ಸ್ಟೆಬಲ್ ಪರಮಾನಂದ ಕೊರ್ರಂ ಅವರನ್ನು ರಾಯ್ಪುರಕ್ಕೆ ವಿಮಾನದ ಮೂಲಕ ಸಾಗಿಸಲಾಗುತ್ತಿತ್ತು. ಆದರೆ ಅವರನ್ನೂ ಉಳಿಸಲು ಸಾಧ್ಯವಾಗಲಿಲ್ಲ. ಇದರಿಂದ ಈ ಘಟನೆಯಲ್ಲಿ ಹುತಾತ್ಮರಾದ ಸೈನಿಕರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಈ ದುರ್ಘಟನೆಯಲ್ಲಿ ಡಿಆರ್ಜಿ ಉಸ್ತುವಾರಿ ಸುಖರಾಮ್ ವಟ್ಟಿ, ಕಾನ್ಸ್ಟೆಬಲ್ ಕೃಷ್ಣ ಕೊಮ್ರಾ, ಕಾನ್ಸ್ಟೆಬಲ್ ಸಂಜಯ್ ಗಡ್ಪಾಲೆ ಮತ್ತು ಕಾನ್ಸ್ಟೆಬಲ್ ಪರಮಾನಂದ ಕೊರ್ರಂ ಹುತಾತ್ಮರಾಗಿದ್ದಾರೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಿರಂತರ ಕಾರ್ಯಾಚರಣೆ ನಡೆಸುವ ಮೂಲಕ ಎಲ್ಲಾ ಯೋಧರು ರಾಜ್ಯದ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರು.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…