ದೇಶ- ವಿದೇಶ

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.

ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತಾ ಪಡೆಗಳು ನೆಲಬಾಂಬ್ ನಿಷ್ಕ್ರಿಯಗೊಳಿಸುವಲ್ಲಿ ತೊಡಗಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಘಟನೆ ಭದ್ರತಾ ಪಡೆಗಳನ್ನು ಮಾತ್ರವಲ್ಲದೆ ಇಡೀ ರಾಜ್ಯವನ್ನು ತೀವ್ರ ದುಃಖಕ್ಕೆ ದೂಡಿದೆ.

ಕಂಕೇರ್ ಜಿಲ್ಲೆಯ ಛೋಟೆಬೇಥಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ತಂಡವು ಕಂಕೇರ್-ನಾರಾಯಣಪುರ ಗಡಿಯಲ್ಲಿ ಶೋಧ ಕಾರ್ಯಾಚರಣೆ ಮತ್ತು ನೆಲಬಾಂಬ್ ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆಯಲ್ಲಿತ್ತು. ಇದ್ದಕ್ಕಿದ್ದಂತೆ, ನೆಲದಲ್ಲಿ ಹೂತುಹೋಗಿದ್ದ ಐಇಡಿ ಸ್ಛೋಟಗೊಂಡಿತ್ತು.

ಸ್ಛೋಟದ ನಂತರ ಗಾಯಾಳು ಯೋಧರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆಯ ಸಮಯದಲ್ಲಿ ಮೊದಲ ಮೂವರು ಸೈನಿಕರು ಸಾವನ್ನಪ್ಪಿದರು. ಗಂಭೀರವಾಗಿ ಗಾಯಗೊಂಡಿದ್ದ ಕಾನ್‌ಸ್ಟೆಬಲ್ ಪರಮಾನಂದ ಕೊರ್ರಂ ಅವರನ್ನು ರಾಯ್‌ಪುರಕ್ಕೆ ವಿಮಾನದ ಮೂಲಕ ಸಾಗಿಸಲಾಗುತ್ತಿತ್ತು. ಆದರೆ ಅವರನ್ನೂ ಉಳಿಸಲು ಸಾಧ್ಯವಾಗಲಿಲ್ಲ. ಇದರಿಂದ ಈ ಘಟನೆಯಲ್ಲಿ ಹುತಾತ್ಮರಾದ ಸೈನಿಕರ ಸಂಖ್ಯೆ ನಾಲ್ಕಕ್ಕೆ ಏರಿದೆ.

ಈ ದುರ್ಘಟನೆಯಲ್ಲಿ ಡಿಆರ್‌ಜಿ ಉಸ್ತುವಾರಿ ಸುಖರಾಮ್ ವಟ್ಟಿ, ಕಾನ್‌ಸ್ಟೆಬಲ್ ಕೃಷ್ಣ ಕೊಮ್ರಾ, ಕಾನ್‌ಸ್ಟೆಬಲ್ ಸಂಜಯ್ ಗಡ್‌ಪಾಲೆ ಮತ್ತು ಕಾನ್‌ಸ್ಟೆಬಲ್ ಪರಮಾನಂದ ಕೊರ್ರಂ ಹುತಾತ್ಮರಾಗಿದ್ದಾರೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಿರಂತರ ಕಾರ್ಯಾಚರಣೆ ನಡೆಸುವ ಮೂಲಕ ಎಲ್ಲಾ ಯೋಧರು ರಾಜ್ಯದ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರು.

ಆಂದೋಲನ ಡೆಸ್ಕ್

Recent Posts

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

58 mins ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

5 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

5 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

5 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

5 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

5 hours ago