ದೇಶ- ವಿದೇಶ

ಫಲ ನೀಡಿದ ಮಾತುಕತೆ : ಹಾರ್ಮುಜ್ ಜಲಸಂಧಿ ದಾಟಿದ ತೈಲ ಟ್ಯಾಂಕರ್‌

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್‌ಚಿ ಅವರೊಂದಿಗೆ ಮಾರ್ಚ್ 10ರಂದು ನಡೆಸಿದ ಮೂರನೇ ದೂರವಾಣಿ ಮಾತುಕತೆಯ ನಂತರ ಭಾರತೀಯ ಧ್ವಜ ಬೀರಿದ ಎರಡು ತೈಲ ಹಡಗುಗಳು – ಪುಷ್ಪಕ್ ಮತ್ತು ಪರಿಮಲ್ – ಹಾರ್ಮುಜ್ ಜಲಸಂಧಿ ಸುರಕ್ಷಿತವಾಗಿ ದಾಟಿವೆ ಎಂದು ಭಾರತೀಯ ಮೂಲಗಳು ದೃಢಪಡಿಸಿವೆ.

ಇರಾನ್ ಕ್ರಾಂತಿಕಾರಿ ಗಾರ್ಡ್‌ಗಳು ಅಮೆರಿಕ, ಇಸ್ರೇಲ್ ಹಾಗೂ ಯುರೋಪ್ ಸಂಬಂಧಿತ ಹಡಗುಗಳಿಗೆ ನಿರ್ಬಂಧ ಹೇರಿದ್ದರೂ, ಭಾರತೀಯ ಹಡಗುಗಳಿಗೆ ವಿಶೇಷ ಅನುಮತಿ ನೀಡಿದೆ. ಇದರ ಪರಿಣಾಮವಾಗಿ ಒಂದು ಲಿಬೀರಿಯನ್ ಧ್ವಜದ ಹಡಗು (ಭಾರತೀಯ ಕ್ಯಾಪ್ಟನ್) ಮುಂಬೈ ಬಂದರಿಗೆ ಸುರಕ್ಷಿತವಾಗಿ ತಲುಪಿದೆ. ಹಾರ್ಮುಜ್ ಜಲಸಂಧಿ ವಿಶ್ವದ 20-30% ತೈಲ ಸಾಗಣೆಯನ್ನು ನಿರ್ವಹಿಸುತ್ತದೆ. ಇರಾನ್ ಬಂದ್ ಮಾಡಿದ್ದರಿಂದ ಭಾರತದಲ್ಲಿ ತೈಲ ಬೆಲೆ ಏರಿಕೆಯ ಭೀತಿ ತೀವ್ರಗೊಂಡಿತ್ತು.

ಜೈಶಂಕರ್-ಅರಾಗ್‌ಚಿ ಸಂಭಾಷಣೆಯಲ್ಲಿ ಹಡಗುಗಳ ಸುರಕ್ಷತೆ ಮುಖ್ಯ ವಿಷಯವಾಗಿತ್ತು. ಭಾರತ ತನ್ನ ತೈಲದ 40% ಮಧ್ಯಪ್ರಾಚ್ಯದಿಂದ ಆಮದು ಮಾಡುತ್ತದೆ. ಈ ಅನುಮತಿಯಿಂದ ಇಂಧನ ಭದ್ರತೆ ಸುರಕ್ಷಿತವಾಗಿದೆ. ಇರಾನ್ ಕಡೆಯಿಂದ ಕೆಲವು ಮೂಲಗಳು “ನಿರ್ದಿಷ್ಟ ಅನುಮತಿ” ನೀಡಿಲ್ಲ ಎಂದು ತಿರಸ್ಕರಿಸಿದ್ದರೂ, ಹಡಗುಗಳು ಸುರಕ್ಷಿತ ದಾಟುವಿಕೆ ವಾಸ್ತವವಾಗಿದೆ.

ಇರಾನ್‌ ಅಧಿಕಾರಿಗಳು ಭಾರತೀಯ ಟ್ಯಾಂಕರ್‌ಗಳು ಈ ಮಾರ್ಗಗಳನ್ನು ಬಳಸುವುದನ್ನು ಮುಂದುವರಿಸಲು ಅನುಮತಿಸಿದ್ದಾರೆ. ಆದರೆ ಅಮೆರಿಕ, ಯುರೋಪ್‌ ಮತ್ತು ಇಸ್ರೇಲ್‌ಗೆ ಸಂಬಂಧಿಸಿದ ಹಡುಗುಗಳು ಪ್ರಸ್ತುತ ಜಲಮಾರ್ಗದಲ್ಲಿ ನಿರ್ಬಂಧಗಳನ್ನು ಎದುರಿಸುತ್ತಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

1 hour ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

3 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

5 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

5 hours ago