ದೇಶ- ವಿದೇಶ

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2 ಅನ್ನು ಪ್ರಾರಂಭಿಸಿದೆ. ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ಈ ಯೋಜನೆಗೆ ಚಾಲನೆ ನೀಡಿದ್ದು, ಇದು ಹೆಚ್ಚಿನ ಮೌಲ್ಯದ ಉತ್ಪಾದನೆಯನ್ನು ಹೆಚ್ಚಿಸಲು ಹಾಗೂ ಗುಣಮಟ್ಟದ, ವಿವಿಧ ಶ್ರೇಣಿಗಳ ಉಕ್ಕಿನ ಆಮದು ಅವಲಂಬನೆ ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆ ಪರಿಣಾಮಕಾರಿ ಎಂದು ಹೇಳಿದ್ದಾರೆ.

ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಪಿಎಲ್ಐ 1.2 ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಕೇಂದ್ರ ಸಚಿವರ ಸಮಕ್ಷಮದಲ್ಲಿ ಉಕ್ಕು ಉದ್ಯಮದ ಪ್ರಮುಖ ಪಾಲುದಾರರೊಂದಿಗೆ ತಿಳಿವಳಿಕೆ ಒಪ್ಪಂದಗಳಿಗೆ (MoU) ಸಹಿ ಹಾಕಲಾಯಿತು. ಇದು ಭಾರತದ ಉಕ್ಕು ಉದ್ಯಮದ ದೀರ್ಘಕಾಲೀನ ಬೆಳವಣಿಗೆಯ ನಿರೀಕ್ಷೆಗಳಲ್ಲಿ ಬಲವಾದ ವಿಶ್ವಾಸವನ್ನು ಮೂಡಿಸುತ್ತದೆ ಎಂದು ಸಚಿವರು ಹೇಳಿದರು.

ಪಿಎಲ್ಐ 1.2 ಯೋಜನೆ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನಕ್ಕೆ ಸಂಪೂರ್ಣವಾಗಿ ಹೊಂದಿಕೆಯಾಗುವ ಹಾಗೂ ಉಕ್ಕು ಉದ್ಯಮದಲ್ಲಿ ಸ್ವಾವಲಂಭನೆ ಸಾಧಿಸುವ ದಿಕ್ಕಿನಲ್ಲಿ ದೃಢವಾದ ಹೆಜ್ಜೆಯಾಗಿದೆ. ಅಲ್ಲದೆ, ಜಾಗತಿಕವಾಗಿ ಸ್ಪರ್ಧಾತ್ಮಕ ಶಕ್ತಿಯನ್ನು ಹೊಂದಿ ದೇಶದಲ್ಲಿ ಪೂರಕ ವ್ಯವಸ್ಥೆಯನ್ನು ನಿರ್ಮಿಸುವತ್ತ ಒಂದು ನಿರ್ಣಾಯಕ ಉಪಕ್ರಮವಾಗಿದೆ ಎಂದು ಅವರು ಒತ್ತಿ ಹೇಳಿದರು.

ಈ ಯೋಜನೆಯು ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತಕ್ಕೆ ಅನುಗುಣವಾಗಿದ್ದು, ರಾಷ್ಟ್ರೀಯ ಆದ್ಯತೆಗಳಿಗೆ ತಕ್ಕಂತೆ ಉಕ್ಕು ಉದ್ಯಮವನ್ನು ಮುನ್ನಡೆಸುತ್ತದೆ ಎಂದು ಅವರು ಪ್ರತಿಪಾದಿಸಿದರು.

ಪಿಎಲ್ಐ ಯೋಜನೆ 1.2ರ ಅಡಿಯಲ್ಲಿ 85 ಒಪ್ಪಂದಗಳಿಗೆ 55 ಕಂಪನಿಗಳೊಂದಿಗೆ ತಿಳಿವಳಿಕೆ ಪತ್ರಗಳಿಗೆ ಸಹಿ ಹಾಕಲಾಗಿದ್ದು, ₹11,887 ಕೋಟಿ ಹೂಡಿಕೆ ಮಾಡಲಾಗಿದೆ. ಈ ಯೋಜನೆಗಳು 2031ರ ಹಣಕಾಸು ವರ್ಷದ ವೇಳೆಗೆ 8.7 ಮಿಲಿಯನ್ ಟನ್ ವಿಶೇಷ ಉಕ್ಕಿನ ಉತ್ಪಾದನಾ ಸಾಮರ್ಥ್ಯವನ್ನು ಹೊಂದುವ ನಿರೀಕ್ಷೆಯಿದೆ. ಇದು ಶಕ್ತಿಶಾಲಿ ಉಕ್ಕು, ಮಿಶ್ರಲೋಹ ಮತ್ತು ಸ್ಟೇನ್‌ಲೆಸ್ ಸ್ಟೀಲ್‌ಗಳು, ಲೇಪಿತ ಉತ್ಪನ್ನಗಳು ಮತ್ತು ವಿವಿಧ ರಾಷ್ಟ್ರೀಯ ವ್ಯೂಹಾತ್ಮಕ ವಲಯಗಳಿಗೆ ಅಗತ್ಯವಿರುವ ಅತ್ತುತ್ತಮ ಶ್ರೇಣಿಯ ಉನ್ನತ ಗುಣಮಟ್ಟದ ಉಕ್ಕು ಪೂರೈಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.

ಆಟೋಮೊಬೈಲ್, ರೇಲ್ವೆ, ರಕ್ಷಣೆ, ವಿದ್ಯುತ್ ವಲಯಗಳ ಉಪಕರಣಗಳ ತಯಾರಿಕೆಗೆ ಮತ್ತು ಏರೋಸ್ಪೇಸ್ ಸೇರಿದಂತೆ ವಿವಿಧ ಪ್ರಮುಖ ಕ್ಷೇತ್ರಗಳಿಗೆ ಅಗತ್ಯವಾದ ವಿಶೇಷ ಉಕ್ಕಿನ ಮೂಪಕ ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವತ್ತ ಅಗತ್ಯ ಸಹಕಾರ, ಸಹಯೋಗ ನೀಡುತ್ತದೆ. ಕೈಗಾರಿಕಾ ಬೇಡಿಕೆಗೆ ತಕ್ಕಂತೆ ಪಿಎಲ್ಐ ಯೋಜನೆಯ ಮೂರನೇ ಸುತ್ತನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

ಯೋಜನೆಯ ವಿಶಾಲ ಪರಿಣಾಮದ ಕುರಿತು ಮಾತನಾಡಿದ ಸಚಿವರು; ಪಿಎಲ್ಐ 1.2 ದೇಶೀಯ ಉತ್ಪಾದನೆಯನ್ನು ಪ್ರೋತ್ಸಾಹಿಸುವ ಮೂಲಕ ವಿದೇಶಿ ವಿನಿಮಯವನ್ನು ಸಂರಕ್ಷಿಸುವ ಮೂಲಕ ಭಾರತವನ್ನು ಸುಧಾರಿತ ಉಕ್ಕಿನ ವಿಶ್ವಾಸಾರ್ಹ ಜಾಗತಿಕ ಪೂರೈಕೆದಾರನಾಗಿ ಹೊರಹೊಮ್ಮಿಸುವ ದಿಕ್ಕಿನಲ್ಲಿ ರಚನಾತ್ಮಕವಾಗಿ ಕೆಲಸ ಮಾಡುತ್ತದೆ ಎಂದರು ಅವರು ಪಾಲುದಾರರಿಗೆ ತಿಳಿಸಿದರು.

ಹಿಂದಿನ ಸುತ್ತಿನ ಎರಡು ಪಿಎಲ್ಐ ಯೋಜನೆಗಳು ಉಕ್ಕು ಉದ್ಯಮದ ನಿರೀಕ್ಷೆಗಳನ್ನು ಪೂರೈಸಿ ರಾಷ್ಟ್ರಕ್ಕೆ ಅನುಕೂಲ ಮಾಡಿವೆ. ಅದರಂತೆಯೇ ಪಿಎಲ್ಐ 1.0 ಮತ್ತು 1.1ರಲ್ಲಿ, ₹43,874 ಕೋಟಿಯಷ್ಟು ನಿಗದಿತ ಹೂಡಿಕೆಗಳು ಈಗಾಗಲೇ ಗುರಿ ಸಾಧಿಸಿವೆ. ಪಿಎಲ್ಐ 1.2 ಯೋಜನೆ ಹಿಂದಿನ ಫಲಿತಾಂಶ ಉತ್ತೇಜನಕಾರಿ ಮುನ್ನಡೆಯಿಂದ ಪ್ರೇರಿತಗೊಂಡು ರೂಪಿಸಲ್ಪಟ್ಟಿದೆ. ದೇಶೀಯ ಉಕ್ಕಿನ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಸಂಪೂರ್ಣ ಮೌಲಿಕ ಸರಪಳಿಯನ್ನು ಗಟ್ಟಿಗೊಳಿಸುವ ಕೆಲಸವನ್ನು ಅದು ಮಾಡುತ್ತದೆ ಎಂದು ಸಚಿವರು ವಿವರಿಸಿದರು.

ಈ ಸಂದರ್ಭದಲ್ಲಿ ಉಕ್ಕು ಸಚಿವಲಾಯದ ಕಾರ್ಯದರ್ಶಿ ಸೇರಿದಂತೆ ಉನ್ನತ ಅಧಿಕಾರಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

5 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

6 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

6 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

7 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

7 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

8 hours ago