ಬಾಲಿ: ಭಾರತ ಡಿಸೆಂಬರ್ ಒಂದರಿಂದ ಅಧಿಕೃತವಾಗಿ ಜಿ20 ಶೃಂಗಸಭೆಯ ಅಧ್ಯಕ್ಷ ಸ್ಥಾನ ಅಲಂಕರಿಸಲಿದೆ. ಬುಧವಾರ ನಡೆದ ಬಾಲಿ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೊಡೊ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿ20 ಶೃಂಗಸಭೆಯ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರ ಮಾಡಿದರು. ಡಿಸೆಂಬರ್ 1 ರಿಂದ ಭಾರತ ಅಧಿಕೃತವಾಗಿ ಜಿ20ಯ ಅಧ್ಯಕ್ಷ ಸ್ಥಾನದಲ್ಲಿ ಆಸೀನವಾಗಲಿದೆ.
“” ಬಾಲಿಯ ಈ ಪ್ರಾಚೀನ ಮತ್ತು ಮಹಾನ್ ಭೂಮಿಯಲ್ಲಿ ಜಿ 20 ಅಧ್ಯಕ್ಷ ಸ್ಥಾನವನ್ನು ಏರಿದ್ದು, ವೈಯಕ್ತಿಕವಾಗಿ ನನಗೆ ಹಾಗೂ ಭಾರತಕ್ಕೆ ಅದೃಷ್ಟದ ಕ್ಷಣ ಎಂದು ಭಾವಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಈ ವೇಳೆ ಹೇಳಿದರು. ಭಾರತದ ಮುಂಬರುವ ಜಿ 20 ಅಧ್ಯಕ್ಷ ಸ್ಥಾನವು ಡಿಜಿಟಲ್ ವಿಭಜನೆಗೆ ಸೇತುವೆಯಾಗಿ ಕೆಲಸ ಮಾಡುತ್ತದೆ. ವಿಶೇಷವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಮತ್ತು ಡಿಜಿಟಲ್ ತಂತ್ರಜ್ಞಾನಗಳು ಮತ್ತು ರೂಪಾಂತರದಿಂದ ಹೆಚ್ಚಿನ ಪ್ರಯೋಜನಗಳನ್ನು ಖಾತರಿಪಡಿಸುವುದರ ಮೇಲೆ ಕೇಂದ್ರೀಕರಿಸುತ್ತದೆ ʼʼ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದರು.
ಬಾಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಡಿಜಿಟಲ್ ರೂಪಾಂತರದ ಕುರಿತು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಮುಂದಿನ ದಶಕದಲ್ಲಿ ಡಿಜಿಟಲ್ ಸೇರ್ಪಡೆಗಾಗಿ ಒಟ್ಟಾಗಿ ಕೆಲಸ ಮಾಡುವುದಾಗಿ ಪ್ರತಿಜ್ಞೆ ಮಾಡುವಂತೆ ಇತರ ಜಿ 20 ನಾಯಕರನ್ನು ಒತ್ತಾಯಿಸಿದರು.
“ಅಭಿವೃದ್ಧಿಗಾಗಿ ಡೇಟಾ” ತತ್ವವು ನಮ್ಮ ಅಧ್ಯಕ್ಷತೆಯ ಒಟ್ಟಾರೆ ವಿಷಯವಾದ ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ದ ಅವಿಭಾಜ್ಯ ಅಂಗವಾಗಿರುತ್ತದೆ” ಎಂದು ಅವರು ಹೇಳಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…