ದೇಶ- ವಿದೇಶ

ಜಿ20 ಶೃಂಗಸಭೆ ಅಧ್ಯಕ್ಷತೆ ಭಾರತಕ್ಕೆ ಹಸ್ತಾಂತರ

ಬಾಲಿ: ಭಾರತ ಡಿಸೆಂಬರ್‌ ಒಂದರಿಂದ ಅಧಿಕೃತವಾಗಿ ಜಿ20 ಶೃಂಗಸಭೆಯ ಅಧ್ಯಕ್ಷ ಸ್ಥಾನ ಅಲಂಕರಿಸಲಿದೆ. ಬುಧವಾರ ನಡೆದ ಬಾಲಿ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೊಡೊ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿ20 ಶೃಂಗಸಭೆಯ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರ ಮಾಡಿದರು. ಡಿಸೆಂಬರ್‌ 1 ರಿಂದ ಭಾರತ ಅಧಿಕೃತವಾಗಿ ಜಿ20ಯ ಅಧ್ಯಕ್ಷ ಸ್ಥಾನದಲ್ಲಿ ಆಸೀನವಾಗಲಿದೆ.

“” ಬಾಲಿಯ ಈ ಪ್ರಾಚೀನ ಮತ್ತು ಮಹಾನ್ ಭೂಮಿಯಲ್ಲಿ ಜಿ 20 ಅಧ್ಯಕ್ಷ ಸ್ಥಾನವನ್ನು ಏರಿದ್ದು, ವೈಯಕ್ತಿಕವಾಗಿ ನನಗೆ ಹಾಗೂ ಭಾರತಕ್ಕೆ ಅದೃಷ್ಟದ ಕ್ಷಣ ಎಂದು ಭಾವಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಈ ವೇಳೆ ಹೇಳಿದರು. ಭಾರತದ ಮುಂಬರುವ ಜಿ 20 ಅಧ್ಯಕ್ಷ ಸ್ಥಾನವು ಡಿಜಿಟಲ್ ವಿಭಜನೆಗೆ ಸೇತುವೆಯಾಗಿ ಕೆಲಸ ಮಾಡುತ್ತದೆ. ವಿಶೇಷವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಮತ್ತು ಡಿಜಿಟಲ್ ತಂತ್ರಜ್ಞಾನಗಳು ಮತ್ತು ರೂಪಾಂತರದಿಂದ ಹೆಚ್ಚಿನ ಪ್ರಯೋಜನಗಳನ್ನು ಖಾತರಿಪಡಿಸುವುದರ ಮೇಲೆ ಕೇಂದ್ರೀಕರಿಸುತ್ತದೆ ʼʼ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದರು.

ಬಾಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಡಿಜಿಟಲ್ ರೂಪಾಂತರದ ಕುರಿತು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಮುಂದಿನ ದಶಕದಲ್ಲಿ ಡಿಜಿಟಲ್ ಸೇರ್ಪಡೆಗಾಗಿ ಒಟ್ಟಾಗಿ ಕೆಲಸ ಮಾಡುವುದಾಗಿ ಪ್ರತಿಜ್ಞೆ ಮಾಡುವಂತೆ ಇತರ ಜಿ 20 ನಾಯಕರನ್ನು ಒತ್ತಾಯಿಸಿದರು.

“ಅಭಿವೃದ್ಧಿಗಾಗಿ ಡೇಟಾ” ತತ್ವವು ನಮ್ಮ ಅಧ್ಯಕ್ಷತೆಯ ಒಟ್ಟಾರೆ ವಿಷಯವಾದ ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ದ ಅವಿಭಾಜ್ಯ ಅಂಗವಾಗಿರುತ್ತದೆ” ಎಂದು ಅವರು ಹೇಳಿದರು.

andolanait

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

4 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

4 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

4 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

4 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

5 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

5 hours ago