ಬಾಲಿ: ಇಡೀ ಜಗತ್ತು ಆರ್ಥಿಕ ಹಿಂಜರಿತದಿಂದಾಗಿ ವ್ಯಾಪಕ ಹೊಡತೆಕ್ಕೊಳಗಾಗಿದ್ದು, ಹಾಲಿ ಜಿ-೨೦ ಶೃಂಗ ಸಭೆಯಲ್ಲಿ ಇದು ಪ್ರಮುಖ ಚರ್ಚಿತ ವಿಷಯವಾಗಿರಲಿದೆ. ನಾಯಕರು ಸಾಂಘಿಕ ಚೇತರಿಕೆ, ’ಒಟ್ಟಿಗೆ ಚೇತರಿಕೆ, ಬಲಿಷ್ಠ ಚೇತರಿಕೆ’ ಎಂಬ ಘೋಷವಾಕ್ಯ ಮತ್ತು ವಿಷಯದ ಅಡಿಯಲ್ಲಿ ಜಾಗತಿಕ ಕಾಳಜಿಯ ಪ್ರಮುಖ ವಿಷಯಗಳ ಕುರಿತು ವ್ಯಾಪಕವಾಗಿ ಚರ್ಚಿಸಲಿದ್ದಾರೆ.
ಶೃಂಗಸಭೆಯ ಸಮಯದಲ್ಲಿ, ಪ್ರಧಾನಿ ಮೋದಿ ಮತ್ತು ಇತರ ಜಿ-೨೦ ನಾಯಕರು ಜಾಗತಿಕ ಆರ್ಥಿಕತೆುಂ ಸ್ಥಿತಿ, ಇಂಧನ, ಪರಿಸರ, ಕೃಷಿ, ಆರೋಗ್ಯ ಮತ್ತು ಡಿಜಿಟಲ್ ರೂಪಾಂತರಕ್ಕೆ ಸಂಬಂಧಿಸಿದ ಸಮಸ್ಯೆಗಳು ಸೇರಿದಂತೆ ಸಮಕಾಲೀನ ಪ್ರಸ್ತುತತೆಯ ಪ್ರಮುಖ ವಿಷಯಗಳ ಬಗ್ಗೆ ವ್ಯಾಪಕವಾಗಿ ಚರ್ಚಿಸಲಿದ್ದಾರೆ ಎಂದು ಕ್ವಾತ್ರಾ ಹೇಳಿದರು.
ಉಕ್ರೇನ್ನಲ್ಲಿನ ಸಂಘರ್ಷದ ಬೆಳಕಿನಲ್ಲಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅನುಪಸ್ಥಿತಿಯಲ್ಲಿ, ಶೃಂಗಸಭೆಯಲ್ಲಿ ಭಾಗವಹಿಸುವ ಎಲ್ಲಾ ವಿಶ್ವ ನಾಯಕರಿಂದ ಸಂಘರ್ಷದ ಕುರಿತು ಸಾಕಷ್ಟು ಚರ್ಚೆಗಳು ನಡೆಯಲಿವೆ. ‘ಭಾರತವು ನಿರಂತರವಾಗಿ ಸಂಘರ್ಷದ ಮೇಲೆ ಸಮತೋಲಿತ ನಿಲುವನ್ನು ಹೊಂದಿದೆ, ಸಶಸ್ತ್ರ ಸಂಘರ್ಷವನ್ನು ನಿಲ್ಲಿಸಲು ಪ್ರತಿಪಾದಿಸುತ್ತಿದ್ದು, ಎರಡೂ ಕಡೆಯವರು ಸಂವಾದ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗುವಂತೆ ಒತ್ತಾಯಿಸುತ್ತದೆ‘ ಎಂದು ಕ್ವಾತ್ರಾ ಹೇಳಿದ್ದಾರೆ.
ಪ್ರಸ್ತುತ ಜಾಗತಿಕ ಆರ್ಥಿಕ ಮತ್ತು ರಾಜಕೀಯ ಸನ್ನಿವೇಶದಲ್ಲಿ ಜಿ-೨೦ ಚರ್ಚೆಗಳು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು, ಅಸ್ತಿತ್ವದಲ್ಲಿರುವ ಪರಿಸರ ಸವಾಲುಗಳು, ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಪ್ರಗತಿಯ ಕೊರತೆ ಮತ್ತು ಸಾಂಕ್ರಾಮಿಕ ವಿಚಾರದ ಕುರಿತು ಚರ್ಚೆಗಳು ನಡೆಯಲಿವೆ. ಇವುಗಳಲ್ಲಿ ಅಸಮವಾದ ಸಾಂಕ್ರಾಮಿಕ ನಂತರದ ಆರ್ಥಿಕ ಚೇತರಿಕೆ, ವಿಶೇಷವಾಗಿ ಜಾಗತಿಕ ದಕ್ಷಿಣದ ದೇಶಗಳಲ್ಲಿ ಸಾಲದ ದುರ್ಬಲತೆಗಳು, ಯುರೋಪಿನಲ್ಲಿ ನಡೆಯುತ್ತಿರುವ ಸಂಘರ್ಷ, ಮತ್ತು ಆಹಾರ ಭದ್ರತೆ ಸವಾಲುಗಳು, ಇಂಧನ ಬಿಕ್ಕಟ್ಟು ಮತ್ತು ವಿಶ್ವದ ಎಲ್ಲಾ ದೇಶಗಳಲ್ಲಿನ ಹಣದುಬ್ಬರದಂತಹ ಅದರ ನಾಕ್-ಆನ್ ಪರಿಣಾಮ ಸೇರಿವೆ. . ಉ೨೦ ನಾಯಕರು ಈ ಸವಾಲುಗಳನ್ನು ಚರ್ಚಿಸಲಿದ್ದು, ಈ ಸವಾಲುಗಳನ್ನು ಜಯಿಸಲು ಸಹಾಯ ಮಾಡಲು ನಿಕಟವಾದ ಬಹುಪಕ್ಷೀಯ ಸಹಕಾರದ ಪ್ರಾಮುಖ್ಯತೆುಂನ್ನು ಒತ್ತಿಹೇಳುತ್ತಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…