ಮುಂಬೈ: ಹೋಟೆಲ್ ಉದ್ಯಮಿ ಜಯಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ಸ್ಟಾರ್ ಛೋಟಾ ರಾಜನ್ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬಾ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿದೆ. ಈ ಪ್ರಕರಣದಲ್ಲಿ ಆತನಿಗೆ ಜಾಮೀನು ನೀಡಿದೆ.
ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರಿದ್ದ ದ್ವಿಸದಸ್ಯ ಪೀಠವು ಜಾಮೀನು ನೀಡಿದ್ದು, ಜಾಮೀನಿಗಾಗಿ 1 ಲಕ್ಷ ರೂ ಬಾಂಡ್ ನೀಡುವಂತೆ ಛೋಟಾ ರಾಜನ್ಗೆ ಸೂಚಿಸಿದೆ. ಈ ಪ್ರಕರಣದಲ್ಲಿ ಆತನಿಗೆ ಜಾಮೀನು ಸಿಕ್ಕರು ಇತರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆ ಜೈಲಿನಲ್ಲೇ ಉಳಿಯುವುದು ಅನಿವಾರ್ಯ ಎಂದು ತೀರ್ಪು ಪ್ರಕಟಿಸಿದೆ.
2011 ರಲ್ಲಿ ಪತ್ರಕರ್ತ ಜೆಡೇ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಛೋಟಾ ರಾಜನ್ನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ಆತ ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾನೆ. ಬಂಧನದಿಂದ ತಪ್ಪಿಸಿಕೊಳ್ಳುವ ಕುಖ್ಯಾತಿ ಪಡೆದಿದ್ದ ಛೋಟಾ ರಾಜನ್ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಬಳಿಕ 2015ರಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ಆತನನ್ನು ಬಂಧಿಸಲಾಯಿತು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…