ದೇಶ- ವಿದೇಶ

ಸಂಗೀತ ವಿ.ವಿ : ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೈಸೂರು: ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಹಾಗೂ ಹುಬ್ಬಳ್ಳಿಯ ಡಾ.ಗಂಗೂಬಾಯಿ ಹಾನಗಲ್ ಕೇಂದ್ರಕ್ಕೆ 2024-25ನೇ ಶೈಕ್ಷಣಿಕ ಸಾಲಿನಿಂದ ನಡೆಸುವ ಸ್ನಾತಕ, ಸ್ನಾತಕೋತ್ತರ, ಡಿ.ಲಿಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಪಿ.ಎ ಕೋರ್ಸ್ ಗಳಿಗೆ ನೂತನ ಶಿಕ್ಷಣ ನೀತಿ ಅನುಸಾರ ನಾಟಕ ಭರತನಾಟ್ಯ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕರ್ನಾಟಕ ಶಾಸ್ತ್ರೀಯ ಸಂಗೀತ ತಬಲಾ ಮೃದಂಗ ವೀಣಾ ಪಿಟೀಲು ವಿಷಯಗಳು ಹಾಗೂ ಕನ್ನಡ ಸಂಸ್ಕೃತ ಮತ್ತು ಇಂಗ್ಲೀಷ್ ಭಾಷಾ ಪತ್ರಿಕೆಗಳಿಗೆ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ, ಎಂ.ಪಿ.ಎ ಕೋರ್ಸ್ ಗಳಿಗೆ ನಾಟಕ ಭರತನಾಟ್ಯ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕರ್ನಾಟಕ ಶಾಸ್ತ್ರೀಯ ಸಂಗೀತ ಕೋರ್ಸ್ ಗಳಿಗೆ ಯಾವುದೇ ವಿಷಯದಲ್ಲಿ ಪದವಿ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ವಿಶ್ವವಿದ್ಯಾಲಯದ ಮೌಖಿಕ ಪರೀಕ್ಷೆಯಲ್ಲಿ ಅರ್ಹತೆ, ಡಿಲೀಟ್ ವಿಷಯಕ್ಕೆ ಫ್ಯಾಕಲ್ಟಿ ಗಾಯನ ಸಂಗೀತ, ಪ್ರದರ್ಶನ ಉಪಕರಣಗಳು, ನೃತ್ಯ, ಪ್ರದರ್ಶಕ ಕಲೆಗಳು ಮತ್ತು ನಾಟಕಗಳಿಗೆ ಸಂಗೀತ ನೃತ್ಯ ನಾಟಕ ಹಾಗೂ ಪ್ರದರ್ಶಕ ಕಲೆಗಳಲ್ಲಿ ಅಧ್ಯಯನ ನಡೆಸಿ ಉನ್ನತ ಮಟ್ಟದ ಪರಿಣಿತಿ, ಒಂದು ವರ್ಷದ ಡಿಪ್ಲೋಮಾ ಕೋರ್ಸ್ ಮತ್ತು ಸಂಜೆ ಕೋರ್ಸ್ ಗಳಿಗೆ ಹಿಂದೂಸ್ತಾನಿ ಸಂಗೀತ ಕರ್ನಾಟಕ ಸಂಗೀತ ಭರತನಾಟ್ಯ ನಾಟಕ ತಬಲ ಮೃದಂಗ ವೀಣೆ ಮತ್ತು ಯೋಗ ವಿಷಯಕ್ಕೆ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ, ಸರ್ಟಿಫಿಕೇಟ್ ಕೋರ್ಸ್ ಹಾಗೂ ಸಂಜೆ ಕೋರ್ಸ್ ಗಳಿಗೆ ಭಕ್ತಿ ಸಂಗೀತ ಸುಗಮ ಸಂಗೀತ ಜಾನಪದ ಸಂಗೀತ ರಂಗ ಸಂಗೀತ ಭರತನಾಟ್ಯ ನಾಟಕ ಹಾರ್ಮೋನಿಯಂ ತಬಲ ಯೋಗ ಹಿಂದೂಸ್ತಾನಿ ಸಂಗೀತ ಕರ್ನಾಟಕ ಸಂಗೀತ ಯಕ್ಷಗಾನ ಗಮಕ ಸಿತಾರ ಒಡಿಸಿ ಕೀಬೋರ್ಡ್ ಕರ್ನಾಟಕ ಇನ್ಸ್ಟ್ರುಮೆಂಟಲ್ ಗಿಟಾರ್ ಕಥಕ್ ವಿಷಯಕ್ಕೆ ಕನ್ನಡದಲ್ಲಿ ಬರೆಯುವ ಮತ್ತು ಓದುವ ಜ್ಞಾನ ಇರಬೇಕು.

ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ಬರುವ ಎಲ್ಲಾ ಸ್ನಾತಕೋತ್ತರ/ಡಿಪ್ಲೋಮೋ/ಸರ್ಟಿಫಿಕೇಟ್/ಡಿ.ಲಿಟ್ ಕಾರ್ಯಕ್ರಮಗಳಿಗೆ ಪ್ರವೇಶಾತಿಯನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಾಹಕ ವ್ಯವಸ್ಥೆಯ ಪೋರ್ಟಲ್ ಮೂಲಕ ಮಾಡಲಾಗುವುದು. UUCMS ಸಂಬoಧಿಸಿದ ಎಲ್ಲ ಮಾಹಿತಿಯನ್ನು https://uucms.Karnataka.gov.in ನಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ https://www.musicuniversity.ac.in ವೆಬ್‌ಸೈಟ್ ಹಾಗೂ ದೂ.ಸಂ:0821-2402114 ಅಥವಾ 9480150826 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹುಬ್ಬಳ್ಳಿಯಲ್ಲಿ ಮರ್ಯಾದೆ ಹತ್ಯೆ | ಕ್ರೂರಿ ತಂದೆಯನ್ನು ಶೂಟ್‌ ಮಾಡಿ ; ಪ್ರಮೋದ್‌ ಮುತಾಲಿಕ್‌ ಆಗ್ರಹ

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…

9 mins ago

ಸ್ಥಳೀಯವಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಾಣಿಕೆ ಕಷ್ಟ : ಎಚ್‌ಡಿಡಿ

ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…

17 mins ago

ಸಿಲಿಂಡರ್ ಸ್ಪೋಟ ಪ್ರಕರಣ | ಮೃತ ಸಲೀಂ ಜೊತೆ ಬಂದವರು ನಾಪತ್ತೆ‌ ; ಲಾಡ್ಜ್‌ ಶೋಧ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…

44 mins ago

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…

54 mins ago

ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…

60 mins ago

ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ

ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…

1 hour ago