ದೇಶ- ವಿದೇಶ

ಸಂಗೀತ ವಿ.ವಿ : ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೈಸೂರು: ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಹಾಗೂ ಹುಬ್ಬಳ್ಳಿಯ ಡಾ.ಗಂಗೂಬಾಯಿ ಹಾನಗಲ್ ಕೇಂದ್ರಕ್ಕೆ 2024-25ನೇ ಶೈಕ್ಷಣಿಕ ಸಾಲಿನಿಂದ ನಡೆಸುವ ಸ್ನಾತಕ, ಸ್ನಾತಕೋತ್ತರ, ಡಿ.ಲಿಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಪಿ.ಎ ಕೋರ್ಸ್ ಗಳಿಗೆ ನೂತನ ಶಿಕ್ಷಣ ನೀತಿ ಅನುಸಾರ ನಾಟಕ ಭರತನಾಟ್ಯ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕರ್ನಾಟಕ ಶಾಸ್ತ್ರೀಯ ಸಂಗೀತ ತಬಲಾ ಮೃದಂಗ ವೀಣಾ ಪಿಟೀಲು ವಿಷಯಗಳು ಹಾಗೂ ಕನ್ನಡ ಸಂಸ್ಕೃತ ಮತ್ತು ಇಂಗ್ಲೀಷ್ ಭಾಷಾ ಪತ್ರಿಕೆಗಳಿಗೆ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ, ಎಂ.ಪಿ.ಎ ಕೋರ್ಸ್ ಗಳಿಗೆ ನಾಟಕ ಭರತನಾಟ್ಯ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕರ್ನಾಟಕ ಶಾಸ್ತ್ರೀಯ ಸಂಗೀತ ಕೋರ್ಸ್ ಗಳಿಗೆ ಯಾವುದೇ ವಿಷಯದಲ್ಲಿ ಪದವಿ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ವಿಶ್ವವಿದ್ಯಾಲಯದ ಮೌಖಿಕ ಪರೀಕ್ಷೆಯಲ್ಲಿ ಅರ್ಹತೆ, ಡಿಲೀಟ್ ವಿಷಯಕ್ಕೆ ಫ್ಯಾಕಲ್ಟಿ ಗಾಯನ ಸಂಗೀತ, ಪ್ರದರ್ಶನ ಉಪಕರಣಗಳು, ನೃತ್ಯ, ಪ್ರದರ್ಶಕ ಕಲೆಗಳು ಮತ್ತು ನಾಟಕಗಳಿಗೆ ಸಂಗೀತ ನೃತ್ಯ ನಾಟಕ ಹಾಗೂ ಪ್ರದರ್ಶಕ ಕಲೆಗಳಲ್ಲಿ ಅಧ್ಯಯನ ನಡೆಸಿ ಉನ್ನತ ಮಟ್ಟದ ಪರಿಣಿತಿ, ಒಂದು ವರ್ಷದ ಡಿಪ್ಲೋಮಾ ಕೋರ್ಸ್ ಮತ್ತು ಸಂಜೆ ಕೋರ್ಸ್ ಗಳಿಗೆ ಹಿಂದೂಸ್ತಾನಿ ಸಂಗೀತ ಕರ್ನಾಟಕ ಸಂಗೀತ ಭರತನಾಟ್ಯ ನಾಟಕ ತಬಲ ಮೃದಂಗ ವೀಣೆ ಮತ್ತು ಯೋಗ ವಿಷಯಕ್ಕೆ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ, ಸರ್ಟಿಫಿಕೇಟ್ ಕೋರ್ಸ್ ಹಾಗೂ ಸಂಜೆ ಕೋರ್ಸ್ ಗಳಿಗೆ ಭಕ್ತಿ ಸಂಗೀತ ಸುಗಮ ಸಂಗೀತ ಜಾನಪದ ಸಂಗೀತ ರಂಗ ಸಂಗೀತ ಭರತನಾಟ್ಯ ನಾಟಕ ಹಾರ್ಮೋನಿಯಂ ತಬಲ ಯೋಗ ಹಿಂದೂಸ್ತಾನಿ ಸಂಗೀತ ಕರ್ನಾಟಕ ಸಂಗೀತ ಯಕ್ಷಗಾನ ಗಮಕ ಸಿತಾರ ಒಡಿಸಿ ಕೀಬೋರ್ಡ್ ಕರ್ನಾಟಕ ಇನ್ಸ್ಟ್ರುಮೆಂಟಲ್ ಗಿಟಾರ್ ಕಥಕ್ ವಿಷಯಕ್ಕೆ ಕನ್ನಡದಲ್ಲಿ ಬರೆಯುವ ಮತ್ತು ಓದುವ ಜ್ಞಾನ ಇರಬೇಕು.

ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ಬರುವ ಎಲ್ಲಾ ಸ್ನಾತಕೋತ್ತರ/ಡಿಪ್ಲೋಮೋ/ಸರ್ಟಿಫಿಕೇಟ್/ಡಿ.ಲಿಟ್ ಕಾರ್ಯಕ್ರಮಗಳಿಗೆ ಪ್ರವೇಶಾತಿಯನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಾಹಕ ವ್ಯವಸ್ಥೆಯ ಪೋರ್ಟಲ್ ಮೂಲಕ ಮಾಡಲಾಗುವುದು. UUCMS ಸಂಬoಧಿಸಿದ ಎಲ್ಲ ಮಾಹಿತಿಯನ್ನು https://uucms.Karnataka.gov.in ನಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ https://www.musicuniversity.ac.in ವೆಬ್‌ಸೈಟ್ ಹಾಗೂ ದೂ.ಸಂ:0821-2402114 ಅಥವಾ 9480150826 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

28 mins ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

37 mins ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

5 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

10 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

10 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

10 hours ago