ನವದೆಹಲಿ: ಕುಡಿಯುವ ನೀರಿಗಾಗಿ ಜನ ಎನ್ಡಿಎಗೆ ಮತ ನೀಡಿದ್ದಾರೆ. ಹಾಗಾಗಿ ಬೆಂಗಳೂರಿಗೆ ಕುಡಿಯುವ ನೀರು ಕೊಡಿ ಎಂದು ಎಚ್.ಡಿ.ದೇವೇಗೌಡ ರಾಜ್ಯಸಭೆಯಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿಗೆ ಕಾವೇರಿ ನೀರೇ ಆಧಾರ. ಕುಡಿಯುವ ನೀರು ಕೊಡುವ ಭರವಸೆಯ ಮೇಲೆ ಜನರು ಎನ್ಡಿಎಗೆ ಮತ ಹಾಕಿದ್ದಾರೆ. ಆದ್ದರಿಂದ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು ದಿನದಿಂದ ದಿನಕ್ಕೆ ಬೆಳೆಯುತ್ತಿರುವ ನಗರ. ಬೆಂಗಳೂರಿಗೆ ಕುಡಿಯುವ ನೀರಿನ ಅಗತ್ಯವಿದೆ. ಕುಡಿಯಲು ನೀರಿಲ್ಲದೇ ಜನರು ಕಂಗಾಲಾಗಿದ್ದಾರೆ. ಈ ಬಾರಿ ಮಳೆ ಚೆನ್ನಾಗಿ ಆಗಿರುವ ಪರಿಣಾಮ ಜಲಾಶಯಗಳು ತುಂಬಿ ತುಳುಕುತ್ತಿವೆ. ಆದ್ದರಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದರು.
ಬಳಿಕ ಬಜೆಟ್ ಬಗ್ಗೆ ಮಾತನಾಡಿದ ಅವರು, ನಾನು ಹೃದಯಪೂರ್ವಕವಾಗಿ ಬಜೆಟ್ ಬೆಂಬಲಿಸುತ್ತೇನೆ. ನಾನು ಈ ಹಿಂದೆ ಮೋದಿಯವರನ್ನು ವಿರೋಧಿಸಿದ್ದೆ. ಆದರೆ ಈಗ ನಾನು ಎನ್ಡಿಎ ಭಾಗವಾಗಿದ್ದೇನೆ ಎಂದು ಜೆ.ಪಿ.ನಡ್ಡಾಗೆ ಧನ್ಯವಾದ ತಿಳಿಸಿದರು.
ಬಳಿಕ ಕೃಷಿ ಬಗ್ಗೆ ಮಾತನಾಡುತ್ತಾ ಪ್ರಧಾನಿ ನರೇಂದ್ರ ಮೋದಿಯನ್ನು ಹಾಡಿ ಹೊಗಳಿದರು. ಮೋದಿ ಗುಜರಾತ್ನಲ್ಲಿ ತಂದ ಸುಧಾರಣೆಗಳ ಬಗ್ಗೆ ವಿವರಿಸಿ ಶ್ಲಾಘಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…