ವೈಕಂ(ಕೇರಳ): ವೈಕಂ ಹೋರಾಟದ ನೆನಪಿಗೆ ತಮಿಳುನಾಡು ಸರ್ಕಾರ ಕೊಡಮಾಡುವ 2024ನೇ ಸಾಲಿನ ʻವೈಕಂ ಪ್ರಶಸ್ತಿʼಯನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಸ್ವೀಕರಿಸಿದ್ದಾರೆ.
ಕೇರಳದ ವೈಕಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವನೂರ ಮಹಾದೇವರಿಗೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಕೇರಳದ ವೈಕಂನಲ್ಲಿ ನಡೆದಿದ್ದ ವೈಕಂ ಹೋರಾಟಕ್ಕೆ ಇದೀಗ ನೂರು ವರ್ಷ. ಹೋರಾಟದಲ್ಲಿ ಪೆರಿಯಾರ್ ರಾಮಸ್ವಾಮಿ ಅವರು ಭಾಗಿಯಾಗಿದ್ದರು. ಈ ಹಿನ್ನೆಲೆ ಶತಮಾನ ಸಮಾರಂಭ ಮತ್ತು ಪೆರಿಯಾರ್ ಸ್ಮಾರಕ ಉದ್ಘಾಟನಾ ಕಾರ್ಯಕ್ರವನ್ನು ಕೇರಳದ ವೈಕಂದಲ್ಲಿ ತಮಿಳುನಾಡು ಸರ್ಕಾರದಿಂದ ಗುರುವಾರ ಹಮ್ಮಿಕೊಳ್ಳಲಾಗಿತ್ತು. ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಕೇರಳ ಸಿಎಂ ಪಿಣರಾಯ್ ವಿಜಯನ್ ಪಾಲ್ಗೊಂಡಿದ್ದರು. ಇದೇ ವೇದಿಕೆ ಕಾರ್ಯಕ್ರಮದಲ್ಲಿ ದೇವನೂರ ಮಹದೇವ ಅವರಿಗೆ ವೈಕಂ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿದ ದೇವನೂರ ಮಹಾದೇವ ತಾವು ಬರೆದಿರುವ ʻಆರ್ಎಸ್ಎಸ್ ಆಳ ಅಗಲʼ ಪುಸ್ತಕದ ಕನ್ನಡ, ಇಂಗ್ಲಿಷ್ ಮತ್ತು ಮಲೆಯಾಳಂ ಅವತರಣಿಯನ್ನು ಕೇರಳ ಸಿಎಂ ವಿಜಯನ್ ಮತ್ತು ಕನ್ನಡ, ಇಂಗ್ಲಿಷ್, ತಮಿಳು ಅವತರಣಿಯನ್ನು ತಮಿಳುನಾಡು ಸಿಎಂ ಸ್ಟಾಲಿನ್ ಅವರಿಗೂ ನೀಡಿದರು.
ವೈಕಂ ಪ್ರಶಸ್ತಿಯು 5 ಲಕ್ಷ ರೂ.ನಗದು ಮತ್ತು ಸ್ವರ್ಣಲೇಪಿತ ಪದಕವನ್ನು ಒಳಗೊಂಡಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುತ್ತದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…